ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಸದ್ಯದಲ್ಲಿಯೇ ಅದು ಕಾನೂನು ಆಗಿ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
ಮುಸ್ಲಿಂ ಧರ್ಮದ ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್ ಪದ್ಧತಿಗೆ ಸಮ್ಮತಿ ಇತ್ತು. ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ಕೊಡಬಹುದಾಗಿತ್ತು.
ಇಸ್ಲಾಮ್ ನ ಮೂಲ ಕಾನೂನಿನಲ್ಲಿ ತ್ರಿವಳಿ ತಲಾಖ್ ಗೆ ಬೇರೆಯೇ ವಿಧಿವಿಧಾನಗಳು ಇವೆ. ಆದರೂ ಈಗೀಗ ಈ ಕಾನೂನು ದುರ್ಬಳಕೆಯಾಗಿ ಇನ್ಸ್ ಟಂಟ್ ತಲಾಖ್ (ತತ್ ಕ್ಷಣವೇ ನೀಡುವ ವಿಚ್ಛೇದನ) ಆಗಿಬಿಟ್ಟಿದೆ. ಮುಸ್ಲಿಂ ಪುರುಷರು ಇದನ್ನು ದುರ್ಬಳಕೆ ಮಾಡುವುದರಿಂದ ಮದುವೆಯಾದ ಮುಸ್ಲಿಂ ಮಹಿಳೆಯರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿತ್ತು.
ಇದನ್ನು ಮನಗಂಡ ಕೇಂದ್ರ ಸರ್ಕಾರ ಈ ಸಾಮಾಜಿಕ ಪಿಡುಗನ್ನು ಹೊಡೆದೋಡಿಸಲು ತ್ರಿವಳಿ ತಲಾಖ್ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಿತು. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಕೂಡ ಸಿಕ್ಕಿದ್ದು ಇನ್ನು ಮುಂದೆ ತ್ರಿವಳಿ ತಲಾಖ್ ಹೇಳಿದರೆ ಕ್ರಿಮಿನಲ್ ಅಪರಾಧವಾಗಲಿದೆ. ಲೋಕಸಭೆಯಲ್ಲಿ ಮುಸ್ಲಿಂ ಮಹಿಳೆಯರ (ಮದುವೆಯ ಹಕ್ಕುಗಳ ರಕ್ಷಣೆ) ಮಸೂದೆ ಕಳೆದ ವಾರ ಅನುಮೋದನೆಗೊಂಡಿತ್ತು.
ಇನ್ನು ಮುಂದೆ ಮುಸಲ್ಮಾನ ಧರ್ಮದಲ್ಲಿ ಪತ್ನಿಗೆ ತ್ರಿವಳಿ ತಲಾಖ್ ಹೇಳಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಆಗುತ್ತದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…