Featured

ದಂಡತೀರ್ಥ ಪಿ.ಯು. ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ : vishwanews24

ದಂಡತೀರ್ಥ ಪಿ.ಯು. ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಕಾಪು, ಮಾ. ೧೪ : ದಂಡತೀರ್ಥ ಪದವಿ ಪೂರ್ವ ಕಾಲೇಜಿಗೆ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಡ ಮಾಡಿದ ಕಂಪ್ಯೂಟರ್ ಸಹಿತ ಕಂಪ್ಯೂಟರ್ ಲ್ಯಾಬ್ ಅನ್ನು ಸೋಮವಾರ ಉದ್ಘಾಟಿಸಲಾಯಿತು.

ಕಂಪ್ಯೂಟರ್ ಲ್ಯಾಬ್‌ನ್ನು ಉದ್ಘಾಟಿಸಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರ ಉಡುಪಿ ರೀಜನಲ್ ಕಛೇರಿಯ ಡೆಪ್ಯುಟಿ ಜನರಲ್ ಮೆನೇಜರ್ ಡಾ| ಎಚ್.ಟಿ. ವಾಸಪ್ಪ ಮಾತನಾಡಿ, ಗ್ರಾಹಕರ ಸಹಾಯದಿಂದ ಯೂನಿಯನ್ ಬ್ಯಾಂಕ್ ಉನ್ನತ ಮಟ್ಟವನ್ನು ಏರುವಂತಾಗಿದೆ. ಬ್ಯಾಂಕ್ ತನ್ನ ಸಿಎಸ್‌ಆರ್ ನಿಽಯನ್ನು ಬಳಸಿಕೊಂಡು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಬಹಳಷ್ಟು ಕೊಡುಗೆ, ಸೇವೆಗಳನ್ನು ಒದಗಿಸುತ್ತಿದೆ. ಕೊರೊನಾ ಸಂಕಷ್ಟದ ವೇಳೆ ಜಿಲ್ಲಾಡಳಿತದ ಮನವಿಯಂತೆ ಉಡುಪಿ ಜಿಲ್ಲಾಸ್ಪತ್ರೆಗೆ ೪೨ ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಫ್ಲಾಂಟ್‌ನ್ನು ನೀಡಿ ಸಹಕರಿಸಿದ್ದು, ಶಿಕ್ಷಣ ಕೇಂದ್ರಗಳು, ಆಸ್ಪತ್ರೆಗಳು, ಪಶು ವೈದ್ಯಕೀಯ ಆಸ್ಪತ್ರೆಯೂ ಸೇರಿದಂತೆ ವಿವಿಧ ಸೇವಾ ಕ್ಷೇತ್ರಗಳ ಅಭಿವೃದ್ಧಿಗಾಗಿ ನಿರಂತರ ಕೊಡುಗೆಗಳನ್ನು ನೀಡುತ್ತಾ ಬರುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಡಾ| ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ, ದಂಡತೀಥ ಕನ್ನಡ ಮಾದ್ಯಮ ಪ್ರಾಥಮಿಕ ಶಾಲೆಯಿಂದ ಆರಂಭಗೊಂಡ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ಸೇವೆಯು ಇಂದು ವಿಸ್ತಾರವಾಗಿ ಬೆಳೆದಿದ್ದು, ಸಾವಿರಾರು ಮಂದಿ ಇಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್ ಲ್ಯಾಬ್‌ನ್ನು ತೆರೆಯಲಾಗಿದ್ದು, ಇದಕ್ಕಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಕೊಡುಗೆ ಸ್ಮರಣೀಯವಾಗಿದೆ ಎಂದರು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉಡುಪಿ ರೀಜನಲ್ ಕಛೇರಿಯ ಅಸಿಸ್ಟೆಂಟ್ ಜನರಲ್ ಮೆನೇಜರ್ ರೊಸಾಲಿನ್ ರೋಡ್ರಿಗಸ್, ಮಾರುಕಟ್ಟೆ ಪ್ರಬಂಧಕ ಮಂಜುನಾಥ್, ಕಾಪು ಶಾಖಾ ಹಿರಿಯ ಪ್ರಬಂಧಕ ಜೋಯಲ್ ಫ್ರಾನ್ಸಿಸ್ ಮೆನೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವರ್ಷಾ ಪ್ರಭು ಸ್ವಾಗತಿಸಿದರು. ಆಡಳಿತಾಽಕಾರಿ ಅಲ್ಬನ್ ರೋಡ್ರಿಗಸ್ ಪ್ರಸ್ತಾವನೆಗೈದರು. ಕಂಪ್ಯೂಟರ್ ಶಿಕ್ಷಕಿ ಮನೀಷಾ ವಂದಿಸಿದರು. ಉಪನ್ಯಾಸಕ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago