ಮಂಗಳೂರು: ಉಪ್ಪಿನಂಗಡಿ ವ್ಯಕ್ತಿಯೊಬ್ಬರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
ಇದರೊಂದಿಗೆ 12 ದಿನಗಳ ಬಳಿಕ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಕೊರೋನ ದೃಢಪಟ್ಟ 13ನೇ ಪ್ರಕರಣ ಇದಾಗಿದೆ.
39 ವರ್ಷದ ಈ ವ್ಯಕ್ತಿ ಇತ್ತೀಚೆಗೆ ದಿಲ್ಲಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿದ್ದಾರೆ ಎಂದು ಹೇಳಲಾಗಿದೆ. ಈ ವ್ಯಕ್ತಿ ಈಗಾಗಲೇ ಹೋಂ ಕ್ವಾರಂಟೈನ್ನಲ್ಲಿದ್ದು, ಅವರ ಗಂಟಲ ದ್ರವದ ಪರೀಕ್ಷಾ ವರದಿ ಬಂದಿದ್ದು, ಪಾಸಿಟಿವ್ ಆಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನ ದೃಢಪಟ್ಟು ಚಿಕಿತ್ಸೆಯಲ್ಲಿದ್ದ 13 ಮಂದಿಯ ಪೈಕಿ ಒಂಬತ್ತು ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…