ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.
ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಭಯೋತ್ಪಾದಕ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ, ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಕಾರ್ಯ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿನ ಫುಲ್ವಾರಿ ಶರೀಫ್ ಪ್ರಕರಣಗಳೂ ಸೇರಿದಂತೆ ದೇಶದಲ್ಲಿ ಕೋಮು ಗಮಭೆ ಸೃಷ್ಠಿಸಲು ಯತ್ನಿಸಿದ ಆರೋಪಗಳೆಲ್ಲವೂ ಸೇರಿ ವಿವಿಧ ಪ್ರಕರಣಗಳ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ ಹಲವು ಕಡೆಗಳಲ್ಲಿ ಸಾಕಷ್ಟು ಮನೆ, ಕಚೇರಿಗಳು, ಒಂದು ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…