Featured

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ… Vishwanews24

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ…

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.

ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಭಯೋತ್ಪಾದಕ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ, ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಕಾರ್ಯ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿನ ಫುಲ್ವಾರಿ ಶರೀಫ್ ಪ್ರಕರಣಗಳೂ ಸೇರಿದಂತೆ ದೇಶದಲ್ಲಿ ಕೋಮು ಗಮಭೆ ಸೃಷ್ಠಿಸಲು ಯತ್ನಿಸಿದ ಆರೋಪಗಳೆಲ್ಲವೂ ಸೇರಿ ವಿವಿಧ ಪ್ರಕರಣಗಳ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ ಹಲವು ಕಡೆಗಳಲ್ಲಿ ಸಾಕಷ್ಟು ಮನೆ, ಕಚೇರಿಗಳು, ಒಂದು ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago