ದಕ್ಷಿಣಕನ್ನಡ : ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಹಂತಕರು ಸೌದಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಎನ್ಐಎ ಚಾರ್ಜ್ಶೀಟ್ನಲ್ಲಿ ವರದಿ ಬಹಿರಂಗವಾಗಿದೆ.
ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿತ್ತು.
ಎನ್ಐಎ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಹಲವು ವಿಚಾರ ಪ್ರಸ್ತಾಪಿಸಲಾಗಿದ್ದು,ಪ್ರಮುಖ ಆರೋಪಿಗಳಾದ ಮೊಹಮ್ಮದ್ ಶರೀಫ್, ಕೆ.ಎ.ಮಸೂದ್ ಎಂಬ ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಂಡು ಬಂದಿದ್ದು ಮೊಹಮ್ಮದ್ ಮುಸ್ತಫಾ, ಎಂ.ಹೆಚ್.ತುಫೈಲ್, ಎಂ.ಆರ್.ಉಮರ್ ಫಾರೂಕ್, ಅಬೂಬಕರ್ ಸಿದ್ಧಿಕಿ ಎಂಬುವವರು ಅರಬ್ ದೇಶದಲ್ಲಿ ಪತ್ತೆಯಾಗಿದ್ದಾರೆ.
ಸೌದಿಯಲ್ಲಿ ಆರೋಪಿಗಳನ್ನು ಬಂಧಿಸಲು ಎನ್ಐಎ ಭಾರೀ ಪ್ಲ್ಯಾನ್ ಮಾಡಿದ್ದಾರೆ. ಆರೋಪಿಗಳು ಸೌದಿಯಲ್ಲಿ ಸೈಟ್ ಖರೀದಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ 6 ಆರೋಪಿಗಳ ಸುಳಿವಿಗೆ ಒಟ್ಟು 24 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಪತ್ತೆಯಾದ ಹಂತರನ್ನು ಗಲ್ಲಿಗೇರಿಸುತ್ತಾರಾ ಅನ್ನೋದನ್ನು ಕಾದುನೋಡಬೇಕಾಗಿದೆ.
ಪ್ರವೀಣ್ ನೆಟ್ಟಾರನ್ನು ಬಲಿ ತೆಗೆಯಲು ನಿರ್ಧರಿಸಿದ್ದ ಹಂತಕರ ತಂಡ 3 ಬಾರಿ ಸ್ಕೆಚ್ ಹಾಕಿತ್ತು. ಜುಲೈ 26 ರಂದು ಏಕಾಏಕಿ ಪ್ರವೀಣ್ ತಲೆ ಮೇಲೆ ತಲವಾರು ಬೀಸಿ ಹತ್ಯೆ ಮಾಡಿದ್ದಾರೆ. ಬೈಕ್ ಮೂಲಕ ಬಂದಿದ್ದ ಮೂವರ ತಂಡ ಈ ಕೃತ್ಯ ನಡೆಸಿತ್ತು. ಕೊಲೆಯಾದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…