ದಕ್ಷಿಣಕನ್ನಡ : ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಹಂತಕರು ಸೌದಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಎನ್ಐಎ ಚಾರ್ಜ್ಶೀಟ್ನಲ್ಲಿ ವರದಿ ಬಹಿರಂಗವಾಗಿದೆ.
ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿತ್ತು.
ಎನ್ಐಎ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಹಲವು ವಿಚಾರ ಪ್ರಸ್ತಾಪಿಸಲಾಗಿದ್ದು,ಪ್ರಮುಖ ಆರೋಪಿಗಳಾದ ಮೊಹಮ್ಮದ್ ಶರೀಫ್, ಕೆ.ಎ.ಮಸೂದ್ ಎಂಬ ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಂಡು ಬಂದಿದ್ದು ಮೊಹಮ್ಮದ್ ಮುಸ್ತಫಾ, ಎಂ.ಹೆಚ್.ತುಫೈಲ್, ಎಂ.ಆರ್.ಉಮರ್ ಫಾರೂಕ್, ಅಬೂಬಕರ್ ಸಿದ್ಧಿಕಿ ಎಂಬುವವರು ಅರಬ್ ದೇಶದಲ್ಲಿ ಪತ್ತೆಯಾಗಿದ್ದಾರೆ.
ಸೌದಿಯಲ್ಲಿ ಆರೋಪಿಗಳನ್ನು ಬಂಧಿಸಲು ಎನ್ಐಎ ಭಾರೀ ಪ್ಲ್ಯಾನ್ ಮಾಡಿದ್ದಾರೆ. ಆರೋಪಿಗಳು ಸೌದಿಯಲ್ಲಿ ಸೈಟ್ ಖರೀದಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ 6 ಆರೋಪಿಗಳ ಸುಳಿವಿಗೆ ಒಟ್ಟು 24 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಪತ್ತೆಯಾದ ಹಂತರನ್ನು ಗಲ್ಲಿಗೇರಿಸುತ್ತಾರಾ ಅನ್ನೋದನ್ನು ಕಾದುನೋಡಬೇಕಾಗಿದೆ.
ಪ್ರವೀಣ್ ನೆಟ್ಟಾರನ್ನು ಬಲಿ ತೆಗೆಯಲು ನಿರ್ಧರಿಸಿದ್ದ ಹಂತಕರ ತಂಡ 3 ಬಾರಿ ಸ್ಕೆಚ್ ಹಾಕಿತ್ತು. ಜುಲೈ 26 ರಂದು ಏಕಾಏಕಿ ಪ್ರವೀಣ್ ತಲೆ ಮೇಲೆ ತಲವಾರು ಬೀಸಿ ಹತ್ಯೆ ಮಾಡಿದ್ದಾರೆ. ಬೈಕ್ ಮೂಲಕ ಬಂದಿದ್ದ ಮೂವರ ತಂಡ ಈ ಕೃತ್ಯ ನಡೆಸಿತ್ತು. ಕೊಲೆಯಾದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…