ಬೆಂಗಳೂರು: “ದಕ್ಷಿಣ ಭಾರತಕ್ಕೆ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲು. ಕೇರಳವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಕೇಸರಿ ಪಕ್ಷ ಭಿನ್ನವಾಗಿ ಕೆಲಸ ಮಾಡಬೇಕಾದ ಪರಿಣಾಮ ಬೀರಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿಯ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ. ಕರ್ನಾಟಕ ಒಂದು ಹೆಬ್ಬಾಗಿಲು. ತಮಿಳುನಾಡು ಚುನಾವಣೆಯಲ್ಲಿ ಸೋತರೂ ಕೂಡಾ ಪ್ರಭಾವ ಬೀರಿದ್ದೇವೆ. ರಾಜಕೀಯ ಹಿನ್ನಡೆ ಇರುವ ರಾಜ್ಯ ಎಂದರೆ ಅದು ಕೇರಳ. ನಾವು ಕಷ್ಟಪಟ್ಟು ಕೆಲಸ ಮಾಡಿದ್ದು, ವಿಭಿನ್ನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.
“ಕಳೆದ 30 ವರ್ಷಗಳಿಂದ ದಕ್ಷಿಣದಲ್ಲಿ ಕೇಸರಿ ಬಣ್ಣವನ್ನು ಹರಡಲು ಬಿಜೆಪಿಯ ನಾಯಕರು ಶ್ರಮಿಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಆಕಸ್ಮಿಕವಾಗಿ ಬಂದಿಲ್ಲ. ವಿವಿಧ ರಂಗಗಳಲ್ಲಿ ಹಲವು ವರ್ಷಗಳಿಂದ ಕಠಿಣ ಶ್ರಮಪಟ್ಟ ಕಾರಣ ಬಂದಿದೆ” ಎಂದು ಹೇಳಿದ್ದಾರೆ.
“ಕರ್ನಾಟಕದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಅವರಂತಹ ಹಲವಾರು ನಾಯಕರು ಶ್ರಮಿಸಿದ್ದಾರೆ. ತಮಿಳುನಾಡು ಹಾಗೂ ಕೇರಳದಲ್ಲಿ ಬಿಜೆಪಿ ನಾಯಕರು ಚುನಾವಣಾ ಫಲಿತಾಂಶವನ್ನು ಲೆಕ್ಕಿಸದೇ ಶ್ರಮಿಸಿದ್ದಾರೆ. ಬದಲಾವಣೆಯ ಸಮಯ ಬಂದಾಗ ಬಿಜೆಪಿ ಆಯ್ಕೆಯಾಗುವುದು ಖಚಿತ” ಎಂದಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…