Featured

ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ, ಕರ್ನಾಟಕ ಒಂದು ಹೆಬ್ಬಾಗಿಲು : ಸಿಎಂ ಬೊಮ್ಮಾಯಿ – Vishwanews24

ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ, ಕರ್ನಾಟಕ ಒಂದು ಹೆಬ್ಬಾಗಿಲು : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: “ದಕ್ಷಿಣ ಭಾರತಕ್ಕೆ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲು. ಕೇರಳವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಕೇಸರಿ ಪಕ್ಷ ಭಿನ್ನವಾಗಿ ಕೆಲಸ ಮಾಡಬೇಕಾದ ಪರಿಣಾಮ ಬೀರಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿಯ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ. ಕರ್ನಾಟಕ ಒಂದು ಹೆಬ್ಬಾಗಿಲು. ತಮಿಳುನಾಡು ಚುನಾವಣೆಯಲ್ಲಿ ಸೋತರೂ ಕೂಡಾ ಪ್ರಭಾವ ಬೀರಿದ್ದೇವೆ. ರಾಜಕೀಯ ಹಿನ್ನಡೆ ಇರುವ ರಾಜ್ಯ ಎಂದರೆ ಅದು ಕೇರಳ. ನಾವು ಕಷ್ಟಪಟ್ಟು ಕೆಲಸ ಮಾಡಿದ್ದು, ವಿಭಿನ್ನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

“ಕಳೆದ 30 ವರ್ಷಗಳಿಂದ ದಕ್ಷಿಣದಲ್ಲಿ ಕೇಸರಿ ಬಣ್ಣವನ್ನು ಹರಡಲು ಬಿಜೆಪಿಯ ನಾಯಕರು ಶ್ರಮಿಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಆಕಸ್ಮಿಕವಾಗಿ ಬಂದಿಲ್ಲ. ವಿವಿಧ ರಂಗಗಳಲ್ಲಿ ಹಲವು ವರ್ಷಗಳಿಂದ ಕಠಿಣ ಶ್ರಮಪಟ್ಟ ಕಾರಣ ಬಂದಿದೆ” ಎಂದು ಹೇಳಿದ್ದಾರೆ.

“ಕರ್ನಾಟಕದಲ್ಲಿ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಹಾಗೂ ಅನಂತ್‌‌ ಕುಮಾರ್‌ ಅವರಂತಹ ಹಲವಾರು ನಾಯಕರು ಶ್ರಮಿಸಿದ್ದಾರೆ. ತಮಿಳುನಾಡು ಹಾಗೂ ಕೇರಳದಲ್ಲಿ ಬಿಜೆಪಿ ನಾಯಕರು ಚುನಾವಣಾ ಫಲಿತಾಂಶವನ್ನು ಲೆಕ್ಕಿಸದೇ ಶ್ರಮಿಸಿದ್ದಾರೆ. ಬದಲಾವಣೆಯ ಸಮಯ ಬಂದಾಗ ಬಿಜೆಪಿ ಆಯ್ಕೆಯಾಗುವುದು ಖಚಿತ” ಎಂದಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago