ಬೆಂಗಳೂರು: “ದಕ್ಷಿಣ ಭಾರತಕ್ಕೆ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲು. ಕೇರಳವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ ಕೇಸರಿ ಪಕ್ಷ ಭಿನ್ನವಾಗಿ ಕೆಲಸ ಮಾಡಬೇಕಾದ ಪರಿಣಾಮ ಬೀರಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿಯ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ. ಕರ್ನಾಟಕ ಒಂದು ಹೆಬ್ಬಾಗಿಲು. ತಮಿಳುನಾಡು ಚುನಾವಣೆಯಲ್ಲಿ ಸೋತರೂ ಕೂಡಾ ಪ್ರಭಾವ ಬೀರಿದ್ದೇವೆ. ರಾಜಕೀಯ ಹಿನ್ನಡೆ ಇರುವ ರಾಜ್ಯ ಎಂದರೆ ಅದು ಕೇರಳ. ನಾವು ಕಷ್ಟಪಟ್ಟು ಕೆಲಸ ಮಾಡಿದ್ದು, ವಿಭಿನ್ನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.
“ಕಳೆದ 30 ವರ್ಷಗಳಿಂದ ದಕ್ಷಿಣದಲ್ಲಿ ಕೇಸರಿ ಬಣ್ಣವನ್ನು ಹರಡಲು ಬಿಜೆಪಿಯ ನಾಯಕರು ಶ್ರಮಿಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಆಕಸ್ಮಿಕವಾಗಿ ಬಂದಿಲ್ಲ. ವಿವಿಧ ರಂಗಗಳಲ್ಲಿ ಹಲವು ವರ್ಷಗಳಿಂದ ಕಠಿಣ ಶ್ರಮಪಟ್ಟ ಕಾರಣ ಬಂದಿದೆ” ಎಂದು ಹೇಳಿದ್ದಾರೆ.
“ಕರ್ನಾಟಕದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಅವರಂತಹ ಹಲವಾರು ನಾಯಕರು ಶ್ರಮಿಸಿದ್ದಾರೆ. ತಮಿಳುನಾಡು ಹಾಗೂ ಕೇರಳದಲ್ಲಿ ಬಿಜೆಪಿ ನಾಯಕರು ಚುನಾವಣಾ ಫಲಿತಾಂಶವನ್ನು ಲೆಕ್ಕಿಸದೇ ಶ್ರಮಿಸಿದ್ದಾರೆ. ಬದಲಾವಣೆಯ ಸಮಯ ಬಂದಾಗ ಬಿಜೆಪಿ ಆಯ್ಕೆಯಾಗುವುದು ಖಚಿತ” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…