Featured

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ  – Vishwanews24

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮತದಾನ

ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ  ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ.

ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% ಮತದಾನ ದಾಖಲಾಗಿದೆ.

ರಾಜ್ಯದ ಕೆಲವೆಡೆ ಎವಿಎಂ ದೋಷದಿಂದಾಗಿ ಕೆಲ ಸಮಸ್ಯೆಯಾಗಿತ್ತು. ನಂತರ ಇವಿಎಂ ದೋಷವನ್ನು ಸರಿಪಡಿಸಿದ್ದು ಈಗ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಬೆಂಗಳೂರಿನ ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಹೇಳಿದ್ದಾರೆ.

ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಲ್ಲಾ ಕಡೆ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಶುರುವಾಗಿದೆ. ಮತದಾನ ಹೆಚ್ಚಾಗಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago