ಉಡುಪಿ

ದಕ್ಷಿಣ ಕನ್ನಡದಲ್ಲಿ ನಿಫಾ ವೈರಸ್‌ : ಕಟ್ಟೆಚ್ಚರ

ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್‌ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ. ಕೇರಳದಿಂದ ಹೆಚ್ಚಿನ ಮಂದಿ ಮಂಗಳೂರಿಗೆ ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಬಂದು ಹೋಗುವುದರಿಂದ ನಿಫಾ ವೈರಸ್‌ ಇತ್ತ ಕಾಲಿಡದಂತೆ ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆಯು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಇದುವರೆಗೆ ನಿಫಾ ವೈರಸ್‌ ಸೋಂಕು ಪ್ರಕರಣ ವರದಿಯಾಗಿಲ್ಲ.

ಬಾವಲಿ, ಹಂದಿಗಳಿಂದ ವೈರಸ್‌
ನಿಫಾ ವೈರಸ್‌ ಪ್ರಮುಖವಾಗಿ ಬಾವಲಿ, ಹಂದಿಗಳಿಂದ ಹರಡುತ್ತದೆ. ಇತರ ಸಾಕು ಪ್ರಾಣಿಗಳಿಂದಲೂ ಮನುಷ್ಯರಿಗೆ ತಗಲುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾಕು ಪ್ರಾಣಿಗಳಲ್ಲಿ ರೋಗಕಾರಕ ವೈರಸ್‌ ಇದೆಯೇ ಎಂದು ಪತ್ತೆ ಮಾಡಲು ಜಿಲ್ಲೆಯ ಎಲ್ಲ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಜತೆಗೆ ರೋಗ ಪೀಡಿತರ ಕೆಮ್ಮು, ಸೀನುಗಳಿಂದಲೂ ವೈರಸ್‌ ಪ್ರಸರಣ ಆಗುವ ಸಾಧ್ಯತೆ ಇರುವುದರಿಂದ ಅತೀ ಎಚ್ಚರಿಕೆ ಅವಶ್ಯ. ರೋಗ ಲಕ್ಷಣಗಳು ಪತ್ತೆಯಾದಲ್ಲಿ ರಕ್ತದ ಸ್ಯಾಂಪಲ್‌ ಅನ್ನು ಮಣಿಪಾಲ್‌ ಎಂಸಿಇಆರ್‌ಗೆ ಕಳುಹಿಸಿ ಪರೀಕ್ಷಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌ ಅವರು  ತಿಳಿಸಿದ್ದಾರೆ.

ಬಿದ್ದ ಹಣ್ಣು ತಿನ್ನಬೇಡಿ
ಬಾವಲಿಗಳು ಕಚ್ಚಿ ಬಿದ್ದ ಹಣ್ಣುಗಳನ್ನು ಮನುಷ್ಯರು ತಿಂದಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಈಗ ಹಣ್ಣುಗಳ ಋತು ಆಗಿದ್ದು, ಮುನ್ನೆಚ್ಚರಿಕೆಯಾಗಿ ಮರದಿಂದ ಬಿದ್ದಿರುವ ಹಣ್ಣುಗಳನ್ನು ತಿನ್ನಬಾರದು. ಎಲ್ಲ ರೀತಿಯ ಹಣ್ಣುಗಳನ್ನು ಸ್ವತ್ಛವಾಗಿ ತೊಳೆದು ತಿನ್ನಬೇಕು.

ನಿರ್ದಿಷ್ಟ ಔಷಧ ಇಲ್ಲ
ಸಾಕುಪ್ರಾಣಿಗಳ ಮೂಲಕ ಹರಡುವ ಈ ರೋಗಕ್ಕೆ ಇಲ್ಲಿವರೆಗೆ ನಿರ್ದಿಷ್ಟ ಔಷಧ ಇಲ್ಲ, ಲಸಿಕೆಯೂ ಇಲ್ಲ. ಸದ್ಯಕ್ಕೆ ಎಚ್‌1ಎನ್‌1ನಂತಹ ಸಾಂಕ್ರಾಮಿಕ ರೋಗಗಳಿಗೆ ಕೊಡುವ ಆ್ಯಂಟಿ ವೈರಸ್‌ ಔಷಧಿಯನ್ನೇ ಇದಕ್ಕೂ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ
ಡಾ| ರಾಜೇಶ್‌  ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಸಭೆ
ಉಡುಪಿ ಜಿಲ್ಲೆಯಲ್ಲಿ ನಿಫಾ ಜ್ವರ ಕಂಡುಬಂದಿಲ್ಲವಾದರೂ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಎಚ್ಚರಿಕೆಯಿಂದ ಇರುವಂತೆ ಸರಕಾರದಿಂದ ಸೂಚನೆ ಬಂದಿದೆ. ಮೇ 22ರಂದು ಆರೋಗ್ಯ ಇಲಾಖೆಯ ಸಭೆ ನಡೆಯ ಲಿದ್ದು ಈ ಜ್ವರದ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ.

ಎಲ್ಲ  ವೈದ್ಯರಿಗೂ ಸೂಚನೆ
ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ನಿಫಾ ಚಿಕಿತ್ಸೆಗೆ ಈವರೆಗೆ ರೋಗಿಗಳು ದಾಖಲಾಗಿಲ್ಲ. ಆದಾಗ್ಯೂ ನಮ್ಮ ಎಲ್ಲ ವೈದ್ಯರಿಗೆ ಈ ಸಂಬಂಧ ಸೂಚನೆ ನೀಡ ಲಾಗಿದೆ. ರೋಗಿಗಳು ಬಂದಲ್ಲಿ ಅವರನ್ನು ಪ್ರತ್ಯೇಕ ನಿಗಾ ಕೊಠಡಿ ಯಲ್ಲಿರಿಸಿ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗುವುದು. ನಿಫಾ ಬಾಧಿತ ರೋಗಿಗಳು ಅಲ್ಲಲ್ಲಿ ಕಫ, ಎಂಜಲು ಉಗುಳು ವುದು, ಸೇವಿಸಿದ ನೀರು, ಆಹಾರವನ್ನು ಇನ್ನೊಬ್ಬ ರಿಗೆ ನೀಡದಂತೆ ನೋಡಿಕೊಳ್ಳಲಾಗುವುದು. ಅಲ್ಲದೆ ಹೊರಗಿ ನಿಂದ ತಂದ ಹಣ್ಣುಗಳನ್ನು ತೆಗೆದುಕೊಳ್ಳದಂತೆ ಜಾಗ್ರತೆ ವಹಿಸ ಲಾಗುವುದು ಎಂದು ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ನಿಫಾ ವೈರಸ್‌ ಕಾಯಿಲೆ 
ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ.
ಲಸಿಕೆ ಇಲ್ಲ. ನಿರ್ದಿಷ್ಟ ಚಿಕಿತ್ಸೆಯೂ ಇಲ್ಲ. ತೀವ್ರ ನಿಗಾ ಘಟಕದಲ್ಲಿ ಲಕ್ಷಣಾಧಾರಿತ ಚಿಕಿತ್ಸೆ ಮಾತ್ರ ಒದಗಿಸಬಹುದು.
ವಿಶ್ವ ಆರೋಗ್ಯ ಸಂಸ್ಥೆಯ ಟಾಪ್‌ ಟೆನ್‌ “ತೀವ್ರ ಅಪಾಯದ ಸೋಂಕು ರೋಗ’ ಯಾದಿಯಲ್ಲಿ ನಿಫಾ ಸೋಂಕು ಒಂದು.
ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿದಂತೆ ನಿಫಾ ಸೋಂಕಿನಿಂದ ಮರಣ ಸಾಧ್ಯತೆ ಶೇ. 70.
ಹಣ್ಣು ತಿನ್ನುವ ಬಾವಲಿಗಳು ಈ ವೈರಸ್‌ ಹರಡುತ್ತವೆ. ಇತರ ಪ್ರಾಣಿಗಳಿಂದಲೂ ಸಾಧ್ಯ.

 

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago