ಉಡುಪಿ

ದಕ್ಷಿಣ ಕನ್ನಡದಲ್ಲಿ ನಿಫಾ ವೈರಸ್‌ : ಕಟ್ಟೆಚ್ಚರ

ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್‌ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ. ಕೇರಳದಿಂದ ಹೆಚ್ಚಿನ ಮಂದಿ ಮಂಗಳೂರಿಗೆ ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಬಂದು ಹೋಗುವುದರಿಂದ ನಿಫಾ ವೈರಸ್‌ ಇತ್ತ ಕಾಲಿಡದಂತೆ ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆಯು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಇದುವರೆಗೆ ನಿಫಾ ವೈರಸ್‌ ಸೋಂಕು ಪ್ರಕರಣ ವರದಿಯಾಗಿಲ್ಲ.

ಬಾವಲಿ, ಹಂದಿಗಳಿಂದ ವೈರಸ್‌
ನಿಫಾ ವೈರಸ್‌ ಪ್ರಮುಖವಾಗಿ ಬಾವಲಿ, ಹಂದಿಗಳಿಂದ ಹರಡುತ್ತದೆ. ಇತರ ಸಾಕು ಪ್ರಾಣಿಗಳಿಂದಲೂ ಮನುಷ್ಯರಿಗೆ ತಗಲುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾಕು ಪ್ರಾಣಿಗಳಲ್ಲಿ ರೋಗಕಾರಕ ವೈರಸ್‌ ಇದೆಯೇ ಎಂದು ಪತ್ತೆ ಮಾಡಲು ಜಿಲ್ಲೆಯ ಎಲ್ಲ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಜತೆಗೆ ರೋಗ ಪೀಡಿತರ ಕೆಮ್ಮು, ಸೀನುಗಳಿಂದಲೂ ವೈರಸ್‌ ಪ್ರಸರಣ ಆಗುವ ಸಾಧ್ಯತೆ ಇರುವುದರಿಂದ ಅತೀ ಎಚ್ಚರಿಕೆ ಅವಶ್ಯ. ರೋಗ ಲಕ್ಷಣಗಳು ಪತ್ತೆಯಾದಲ್ಲಿ ರಕ್ತದ ಸ್ಯಾಂಪಲ್‌ ಅನ್ನು ಮಣಿಪಾಲ್‌ ಎಂಸಿಇಆರ್‌ಗೆ ಕಳುಹಿಸಿ ಪರೀಕ್ಷಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌ ಅವರು  ತಿಳಿಸಿದ್ದಾರೆ.

ಬಿದ್ದ ಹಣ್ಣು ತಿನ್ನಬೇಡಿ
ಬಾವಲಿಗಳು ಕಚ್ಚಿ ಬಿದ್ದ ಹಣ್ಣುಗಳನ್ನು ಮನುಷ್ಯರು ತಿಂದಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಈಗ ಹಣ್ಣುಗಳ ಋತು ಆಗಿದ್ದು, ಮುನ್ನೆಚ್ಚರಿಕೆಯಾಗಿ ಮರದಿಂದ ಬಿದ್ದಿರುವ ಹಣ್ಣುಗಳನ್ನು ತಿನ್ನಬಾರದು. ಎಲ್ಲ ರೀತಿಯ ಹಣ್ಣುಗಳನ್ನು ಸ್ವತ್ಛವಾಗಿ ತೊಳೆದು ತಿನ್ನಬೇಕು.

ನಿರ್ದಿಷ್ಟ ಔಷಧ ಇಲ್ಲ
ಸಾಕುಪ್ರಾಣಿಗಳ ಮೂಲಕ ಹರಡುವ ಈ ರೋಗಕ್ಕೆ ಇಲ್ಲಿವರೆಗೆ ನಿರ್ದಿಷ್ಟ ಔಷಧ ಇಲ್ಲ, ಲಸಿಕೆಯೂ ಇಲ್ಲ. ಸದ್ಯಕ್ಕೆ ಎಚ್‌1ಎನ್‌1ನಂತಹ ಸಾಂಕ್ರಾಮಿಕ ರೋಗಗಳಿಗೆ ಕೊಡುವ ಆ್ಯಂಟಿ ವೈರಸ್‌ ಔಷಧಿಯನ್ನೇ ಇದಕ್ಕೂ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ
ಡಾ| ರಾಜೇಶ್‌  ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಸಭೆ
ಉಡುಪಿ ಜಿಲ್ಲೆಯಲ್ಲಿ ನಿಫಾ ಜ್ವರ ಕಂಡುಬಂದಿಲ್ಲವಾದರೂ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಎಚ್ಚರಿಕೆಯಿಂದ ಇರುವಂತೆ ಸರಕಾರದಿಂದ ಸೂಚನೆ ಬಂದಿದೆ. ಮೇ 22ರಂದು ಆರೋಗ್ಯ ಇಲಾಖೆಯ ಸಭೆ ನಡೆಯ ಲಿದ್ದು ಈ ಜ್ವರದ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ.

ಎಲ್ಲ  ವೈದ್ಯರಿಗೂ ಸೂಚನೆ
ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ನಿಫಾ ಚಿಕಿತ್ಸೆಗೆ ಈವರೆಗೆ ರೋಗಿಗಳು ದಾಖಲಾಗಿಲ್ಲ. ಆದಾಗ್ಯೂ ನಮ್ಮ ಎಲ್ಲ ವೈದ್ಯರಿಗೆ ಈ ಸಂಬಂಧ ಸೂಚನೆ ನೀಡ ಲಾಗಿದೆ. ರೋಗಿಗಳು ಬಂದಲ್ಲಿ ಅವರನ್ನು ಪ್ರತ್ಯೇಕ ನಿಗಾ ಕೊಠಡಿ ಯಲ್ಲಿರಿಸಿ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗುವುದು. ನಿಫಾ ಬಾಧಿತ ರೋಗಿಗಳು ಅಲ್ಲಲ್ಲಿ ಕಫ, ಎಂಜಲು ಉಗುಳು ವುದು, ಸೇವಿಸಿದ ನೀರು, ಆಹಾರವನ್ನು ಇನ್ನೊಬ್ಬ ರಿಗೆ ನೀಡದಂತೆ ನೋಡಿಕೊಳ್ಳಲಾಗುವುದು. ಅಲ್ಲದೆ ಹೊರಗಿ ನಿಂದ ತಂದ ಹಣ್ಣುಗಳನ್ನು ತೆಗೆದುಕೊಳ್ಳದಂತೆ ಜಾಗ್ರತೆ ವಹಿಸ ಲಾಗುವುದು ಎಂದು ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ನಿಫಾ ವೈರಸ್‌ ಕಾಯಿಲೆ 
ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ.
ಲಸಿಕೆ ಇಲ್ಲ. ನಿರ್ದಿಷ್ಟ ಚಿಕಿತ್ಸೆಯೂ ಇಲ್ಲ. ತೀವ್ರ ನಿಗಾ ಘಟಕದಲ್ಲಿ ಲಕ್ಷಣಾಧಾರಿತ ಚಿಕಿತ್ಸೆ ಮಾತ್ರ ಒದಗಿಸಬಹುದು.
ವಿಶ್ವ ಆರೋಗ್ಯ ಸಂಸ್ಥೆಯ ಟಾಪ್‌ ಟೆನ್‌ “ತೀವ್ರ ಅಪಾಯದ ಸೋಂಕು ರೋಗ’ ಯಾದಿಯಲ್ಲಿ ನಿಫಾ ಸೋಂಕು ಒಂದು.
ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿದಂತೆ ನಿಫಾ ಸೋಂಕಿನಿಂದ ಮರಣ ಸಾಧ್ಯತೆ ಶೇ. 70.
ಹಣ್ಣು ತಿನ್ನುವ ಬಾವಲಿಗಳು ಈ ವೈರಸ್‌ ಹರಡುತ್ತವೆ. ಇತರ ಪ್ರಾಣಿಗಳಿಂದಲೂ ಸಾಧ್ಯ.

 

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

4 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

4 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

4 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

5 hours ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

5 hours ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

6 hours ago