ಉಡುಪಿ

ದಕ್ಷಿಣ ಕನ್ನಡದಲ್ಲಿ ನಿಫಾ ವೈರಸ್‌ : ಕಟ್ಟೆಚ್ಚರ

ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್‌ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ. ಕೇರಳದಿಂದ ಹೆಚ್ಚಿನ ಮಂದಿ ಮಂಗಳೂರಿಗೆ ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಬಂದು ಹೋಗುವುದರಿಂದ ನಿಫಾ ವೈರಸ್‌ ಇತ್ತ ಕಾಲಿಡದಂತೆ ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆಯು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಇದುವರೆಗೆ ನಿಫಾ ವೈರಸ್‌ ಸೋಂಕು ಪ್ರಕರಣ ವರದಿಯಾಗಿಲ್ಲ.

ಬಾವಲಿ, ಹಂದಿಗಳಿಂದ ವೈರಸ್‌
ನಿಫಾ ವೈರಸ್‌ ಪ್ರಮುಖವಾಗಿ ಬಾವಲಿ, ಹಂದಿಗಳಿಂದ ಹರಡುತ್ತದೆ. ಇತರ ಸಾಕು ಪ್ರಾಣಿಗಳಿಂದಲೂ ಮನುಷ್ಯರಿಗೆ ತಗಲುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾಕು ಪ್ರಾಣಿಗಳಲ್ಲಿ ರೋಗಕಾರಕ ವೈರಸ್‌ ಇದೆಯೇ ಎಂದು ಪತ್ತೆ ಮಾಡಲು ಜಿಲ್ಲೆಯ ಎಲ್ಲ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಜತೆಗೆ ರೋಗ ಪೀಡಿತರ ಕೆಮ್ಮು, ಸೀನುಗಳಿಂದಲೂ ವೈರಸ್‌ ಪ್ರಸರಣ ಆಗುವ ಸಾಧ್ಯತೆ ಇರುವುದರಿಂದ ಅತೀ ಎಚ್ಚರಿಕೆ ಅವಶ್ಯ. ರೋಗ ಲಕ್ಷಣಗಳು ಪತ್ತೆಯಾದಲ್ಲಿ ರಕ್ತದ ಸ್ಯಾಂಪಲ್‌ ಅನ್ನು ಮಣಿಪಾಲ್‌ ಎಂಸಿಇಆರ್‌ಗೆ ಕಳುಹಿಸಿ ಪರೀಕ್ಷಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌ ಅವರು  ತಿಳಿಸಿದ್ದಾರೆ.

ಬಿದ್ದ ಹಣ್ಣು ತಿನ್ನಬೇಡಿ
ಬಾವಲಿಗಳು ಕಚ್ಚಿ ಬಿದ್ದ ಹಣ್ಣುಗಳನ್ನು ಮನುಷ್ಯರು ತಿಂದಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಈಗ ಹಣ್ಣುಗಳ ಋತು ಆಗಿದ್ದು, ಮುನ್ನೆಚ್ಚರಿಕೆಯಾಗಿ ಮರದಿಂದ ಬಿದ್ದಿರುವ ಹಣ್ಣುಗಳನ್ನು ತಿನ್ನಬಾರದು. ಎಲ್ಲ ರೀತಿಯ ಹಣ್ಣುಗಳನ್ನು ಸ್ವತ್ಛವಾಗಿ ತೊಳೆದು ತಿನ್ನಬೇಕು.

ನಿರ್ದಿಷ್ಟ ಔಷಧ ಇಲ್ಲ
ಸಾಕುಪ್ರಾಣಿಗಳ ಮೂಲಕ ಹರಡುವ ಈ ರೋಗಕ್ಕೆ ಇಲ್ಲಿವರೆಗೆ ನಿರ್ದಿಷ್ಟ ಔಷಧ ಇಲ್ಲ, ಲಸಿಕೆಯೂ ಇಲ್ಲ. ಸದ್ಯಕ್ಕೆ ಎಚ್‌1ಎನ್‌1ನಂತಹ ಸಾಂಕ್ರಾಮಿಕ ರೋಗಗಳಿಗೆ ಕೊಡುವ ಆ್ಯಂಟಿ ವೈರಸ್‌ ಔಷಧಿಯನ್ನೇ ಇದಕ್ಕೂ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ
ಡಾ| ರಾಜೇಶ್‌  ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಸಭೆ
ಉಡುಪಿ ಜಿಲ್ಲೆಯಲ್ಲಿ ನಿಫಾ ಜ್ವರ ಕಂಡುಬಂದಿಲ್ಲವಾದರೂ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಎಚ್ಚರಿಕೆಯಿಂದ ಇರುವಂತೆ ಸರಕಾರದಿಂದ ಸೂಚನೆ ಬಂದಿದೆ. ಮೇ 22ರಂದು ಆರೋಗ್ಯ ಇಲಾಖೆಯ ಸಭೆ ನಡೆಯ ಲಿದ್ದು ಈ ಜ್ವರದ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ.

ಎಲ್ಲ  ವೈದ್ಯರಿಗೂ ಸೂಚನೆ
ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ನಿಫಾ ಚಿಕಿತ್ಸೆಗೆ ಈವರೆಗೆ ರೋಗಿಗಳು ದಾಖಲಾಗಿಲ್ಲ. ಆದಾಗ್ಯೂ ನಮ್ಮ ಎಲ್ಲ ವೈದ್ಯರಿಗೆ ಈ ಸಂಬಂಧ ಸೂಚನೆ ನೀಡ ಲಾಗಿದೆ. ರೋಗಿಗಳು ಬಂದಲ್ಲಿ ಅವರನ್ನು ಪ್ರತ್ಯೇಕ ನಿಗಾ ಕೊಠಡಿ ಯಲ್ಲಿರಿಸಿ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗುವುದು. ನಿಫಾ ಬಾಧಿತ ರೋಗಿಗಳು ಅಲ್ಲಲ್ಲಿ ಕಫ, ಎಂಜಲು ಉಗುಳು ವುದು, ಸೇವಿಸಿದ ನೀರು, ಆಹಾರವನ್ನು ಇನ್ನೊಬ್ಬ ರಿಗೆ ನೀಡದಂತೆ ನೋಡಿಕೊಳ್ಳಲಾಗುವುದು. ಅಲ್ಲದೆ ಹೊರಗಿ ನಿಂದ ತಂದ ಹಣ್ಣುಗಳನ್ನು ತೆಗೆದುಕೊಳ್ಳದಂತೆ ಜಾಗ್ರತೆ ವಹಿಸ ಲಾಗುವುದು ಎಂದು ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯ ವೈದ್ಯ ಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ನಿಫಾ ವೈರಸ್‌ ಕಾಯಿಲೆ 
ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ.
ಲಸಿಕೆ ಇಲ್ಲ. ನಿರ್ದಿಷ್ಟ ಚಿಕಿತ್ಸೆಯೂ ಇಲ್ಲ. ತೀವ್ರ ನಿಗಾ ಘಟಕದಲ್ಲಿ ಲಕ್ಷಣಾಧಾರಿತ ಚಿಕಿತ್ಸೆ ಮಾತ್ರ ಒದಗಿಸಬಹುದು.
ವಿಶ್ವ ಆರೋಗ್ಯ ಸಂಸ್ಥೆಯ ಟಾಪ್‌ ಟೆನ್‌ “ತೀವ್ರ ಅಪಾಯದ ಸೋಂಕು ರೋಗ’ ಯಾದಿಯಲ್ಲಿ ನಿಫಾ ಸೋಂಕು ಒಂದು.
ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿದಂತೆ ನಿಫಾ ಸೋಂಕಿನಿಂದ ಮರಣ ಸಾಧ್ಯತೆ ಶೇ. 70.
ಹಣ್ಣು ತಿನ್ನುವ ಬಾವಲಿಗಳು ಈ ವೈರಸ್‌ ಹರಡುತ್ತವೆ. ಇತರ ಪ್ರಾಣಿಗಳಿಂದಲೂ ಸಾಧ್ಯ.

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

11 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

15 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

16 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

17 hours ago