ಮಂಗಳೂರು, : ನಾಳೆ ಜನವರಿ 8 ಮತ್ತು 9 ರಂದು ಕರೆ ನೀಡಲಾಗಿರುವ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ, ಅಸಂಘಟಿತ ಸಾರಿಗೆ ಕಾರ್ಮಿಕರ ಸಂಘಟನೆ ಈಗಾಗಲೇ ಬೆಂಬಲ ಸೂಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಮಾಲೀಕರು ಬೆಂಬಲ ನೀಡದಿರಲು ತೀರ್ಮಾನಿಸಿದ್ದಾರೆ.
ಈ ಕುರಿತು ಖಾಸಗಿ ಬಸ್ ಮಾಲೀಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮತ್ತು ನಾಡಿದ್ದು ಮಂಗಳೂರು ಸೇರಿದಂತೆ ಜಿಲ್ಲೆಯ ಇತರೆಡೆ ಎಂದಿನಂತೆ ಖಾಸಗಿ ಬಸ್ ಸಂಚಾರ ಇರಲಿದೆ.
ಮೋಟರ್ ಟ್ರಾನ್ಸ್ ಪೋರ್ಟ್ ಆಂಡ್ ಎಂಜಿನಿಯರಿಂಗ್ ವರ್ಕರ್ಸ್ ಯೂನಿಯನ್ ಬೆಂಬಲಿತ ಕಾರ್ಮಿಕ ಸಂಘಟನೆ, ದಕ್ಷಿಣ ಕನ್ನಡ ಜಿಲ್ಲಾ ಡಿ ವೈ ಎಫ್ ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘ ( ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ( ಜೆ ಸಿ ಟಿ ಯು) , ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪಿಂಚಣಿದಾರರ ಸಂಘ, ಅಖಿಲ ಭಾರತ ಬೀಡಿ ಫೆಡರೇಶನ್ (ಸಿ ಐ ಟಿ ಯು ) ಸೇರಿದಂತೆ ವಿವಿಧ ಸಂಘಟನೆಗಳು ನಾಳಿನ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…