ಮಂಗಳೂರು:” ನನ್ನ ಹೇಳಿಕೆಯನ್ನು ಸದಾ ತಿರುಚಲಾಗುತ್ತದೆ,ನಾನು ರಾಜಕೀಯ ಪಕ್ಷದಿಂದ ಬೆಳೆದಿಲ್ಲ,ರಾಜಕೀಯದಲ್ಲಿ ಆತಂಕದ ವಾತಾವರಣ ಇದೆ,ನಾನು ಆಳುವ ಪಕ್ಷದ ವಿರೋಧಿಯಾಗಿದ್ದೇನೆ,ಒಬ್ಬ ಪ್ರಜೆ, ಪ್ರಜೆಯಾಗಿರೋದಕ್ಕೆ ಸಾಧ್ಯವಾಗುತ್ತಿಲ್ಲ,ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ#JustAsking ಅಭಿಯಾನ ನಿರಂತರವಾಗಿರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.ಅವರು ಇಂದು ಮಂಗಳೂರಿನ ಪ್ರೆಸ್ ಕ್ಲಬಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಹೇಳಿದರು.
ಪಬ್ ದಾಳಿ ಆರೋಪಿಗಳಿಗೆ ಕೋರ್ಟ್ ಖುಲಾಸೆ
ಮಂಗಳೂರಿನಲ್ಲಿ ಘಟಿಸಿದ ಪಬ್ ದಾಳಿಯ ವಿಚಾರದಲ್ಲಿ ಕೋರ್ಟ್ ಸಾಕ್ಷಧಾರ ಇಲ್ಲ ಅಂತ ಹೇಳಿದೆ.ಕಾರ್ಯಕರ್ತರು ಹೊಡೆದಿರುವ ವಿಡಿಯೋ ಕೂಡಾ ಇದೆ.ಕೋರ್ಟ್ ಆಜ್ಞೆ ಜನಸಾಮಾನ್ಯರನ್ನು ಗೊಂದಲ ಮಾಡಿದೆ. ಕೋರ್ಟ್ ಆರ್ಡರ್ ಕೊಟ್ಟಿದ್ದು ನ್ಯಾಯನಾ? ಆಡಳಿತರೂಢ ಕಾಂಗ್ರೆಸ್ ಇದರ ಬಗ್ಗೆ ಪ್ರಶ್ನೆ ಮಾಡಬಹುದಿತ್ತು,ಪ್ರಶ್ನೆ ಮಾಡಿದ್ರೆ ವಿರೋಧಿಯಾಗ್ತಿವಿ ಎಂಬ ಭಯ ಇದೆ,ಕಾಂಗ್ರೆಸ್ ರಾಜಕೀಯ ಪ್ರದರ್ಶನ ಮಾಡುತ್ತಿದೆ ಎಂದು ಬಹುಭಾಷ ನಟ ಪ್ರಕಾಶ್ ರೈ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸೊಂಟದ ಕೆಳಗಿನ ಭಾಷೆ
ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗಲ್ಲ,ಆದರೆ ಕೆಲ ಪಕ್ಷಗಳ ವಿರುದ್ದ ಮಾತನಾಡುತ್ತೇನೆ ಬಿಜೆಪಿ ಕೋಮುವಾದ ದ ಬಗ್ಗೆ ಮಾತನಾಡ್ತೇನೆ ಬಿಜೆಪಿ ಕೋಮುವಾದ ದೇಶದ ಸಾಮರಸ್ಯ ಹಾಳು ಮಾಡುತ್ತೆ ಸಂಸದ ಪ್ರತಾಪ್ ಸಿಂಹ ಬಗ್ಗೆ ನನಗೆ ದ್ವೇಷ ಇಲ್ಲ ಪ್ರತಾಪ್ ಸಿಂಹ ಮುಖವಾಡ ಹಾಕಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಸೊಂಟದ ಕೆಳಗಿನ ಭಾಷೆ ಬಳಕೆ ಮಾಡ್ತಾರೆ,ನಾನು ಒಬ್ಬ ಪ್ರಜೆಯಾಗಿ ಪ್ರತಾಪ್ ಸಿಂಹ ವಿರುದ್ದ ಕೇಸ್ ಹಾಕಿದ್ದೇನೆ ಎಂದು ಅವರು ಪ್ರತಾಪ್ ಸಿಂಹ ವಿರುದ್ದ ಕಿಡಿ ಕಾರಿದ್ದಾರೆ.
ನಿಮ್ಮ ಊರಿನವರು ಕೋಮುವಾದಿಗಳು
ಒಬ್ಬ ಮುಸ್ಲಿಮನ ಕೊಲೆಯಾದ್ರೆ ಇನ್ನೊಬ್ಬ ಹಿಂದುವಿನ ಕೊಲೆ ಮಾಡ್ತಾರೆ,ಕೊಲೆಯ ಬಳಿಕ ಎರಡೂ ಕಡೆಯವರನ್ನು ಬಂಧಿಸಲಾಗುತ್ತೆ.ಬಂಧಿತರ ಮನೆಯವರು ಅನಂತರ ನಾಲ್ಕು ವರ್ಷ ಜೈಲು ಕಾಯುತ್ತಾರೆ,ಆದರೆ ಇದಕ್ಕೆ ಕಾರಣವಾದವರು ಹಾಯಾಗಿರ್ತಾರೆ,ದಕ್ಷಿಣ ಕನ್ನಡದ ಜನ ಹೀಗೇಕೆ ಮಾಡ್ತಾರೆ ಅನ್ನೋದು ಪ್ರಶ್ನೆ, ನಿಮ್ಮ ಊರಿನವರು ಕೋಮುವಾದಿಗಳು ಅಂತ ನನ್ನನ್ನು ಕೇಳುತ್ತಾರೆ,ನನಗೆ ತಲೆತಗ್ಗಿಸುವ ಪರಿಸ್ಥಿತಿ ಉಂಟಾಗಿದೆಎಂದು ಪ್ರಕಾಶ್ ರೈ ಹೇಳಿದರು.
ಬಂಡಲ್ ಷಾ ?
ಪುತ್ತೂರಿನ ಕಾಲೇಜಿನಲ್ಲಿ ಅಮಿತ್ ಷಾನನ್ನು ಟೀಕಿಸಿದ್ರೆ ಸಸ್ಪೆಂಡ್ ಮಾಡ್ತಾರೆ,ಹಾಗಾದ್ರೆ ಬಂಡಲ್ ಷಾ ಅಂತ ಪ್ರಶ್ನೆ ಮಾಡೋಕೆ ರೈಟ್ಸ್ ಇಲ್ಲವೇ? ಪ್ರಶ್ನಿಸುವುದು ವಿದ್ಯಾರ್ಥಿಯ ಹಕ್ಕು ಯಾಕಲ್ಲ ? ಎಂದು ಅವರು ಪ್ರಶ್ನೆ ಮಾಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…