Featured

ದಕ್ಷಿಣ ಕನ್ನಡ, ಉಡುಪಿ : ಜಿಲ್ಲೆಗಳ 17 ಖಾಸಗಿ ಪ.ಪೂ. ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ – Vishwanews24

ದಕ್ಷಿಣ ಕನ್ನಡ, ಉಡುಪಿ: 17 ಖಾಸಗಿ ಪ.ಪೂ. ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ

ಉಡುಪಿ: ದಕ್ಷಿಣ ಕನ್ನಡದ 10 ಹಾಗೂ ಉಡುಪಿಯ 7 ಸೇರಿದಂತೆ ಉಭಯ ಜಿಲ್ಲೆಗಳ 17 ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೂನ್ಯ ದಾಖಲಾತಿ ವರದಿಯಾಗಿದೆ. ಸತತ ಮೂರು ವರ್ಷಗಳಿಂದ ಶೂನ್ಯ ದಾಖಲಾತಿಯಿದ್ದರೆ ಅಂತಹ ಕಾಲೇಜು ಗಳಿಗೆ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ನೀಡುವುದಿಲ್ಲ.

ರಾಜ್ಯದ 541 ಖಾಸಗಿ ಪಿಯು ಕಾಲೇಜು ಗಳ‌ಲ್ಲಿ ಶೂನ್ಯ ದಾಖಲೆಯಿದ್ದು, ಬೆಂಗಳೂರು ದಕ್ಷಿಣ ಮೊದಲು (93), ಬೆಂಗಳೂರು ಉತ್ತರ 2ನೇ (61) ಸ್ಥಾನದಲ್ಲಿದೆ. ಶಿರಸಿಯ 3 ಕಾಲೇಜುಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಕೊನೆ ಸ್ಥಾನದಲ್ಲಿದೆ ಎಂದು ಇಲಾಖೆ ತಿಳಿಸಿದೆ.

2019-20, 2020-21 ಹಾಗೂ 2021- 22ನೇ ಸಾಲಿನಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಶೈಕ್ಷಣಿಕ ಚಟುವಟಿಕೆ ನಡೆಯದೆ ಸ್ಥಗಿತ ಗೊಂಡಿರುವ ಕಾಲೇಜುಗಳು 2022-23ನೇ ಸಾಲಿಗೆ ವಿದ್ಯಾರ್ಥಿಗಳ ಸೇರ್ಪಡೆ ಮಾಡಿ ಕೊಳ್ಳಲು ಅಥವಾ ಎಸ್‌ಎಟಿಎಸ್‌ನಲ್ಲಿ ವಿದ್ಯಾರ್ಥಿ ಗಳ ಮಾಹಿತಿ ಅಪ್‌ಲೋಡ್‌ ಮಾಡಲು ಅವಕಾಶ ಇರುವುದಿಲ್ಲ.

ಶೂನ್ಯ ದಾಖಲಾತಿ ಹೊಂದಿರುವ ಖಾಸಗಿ ಪ.ಪೂ. ಕಾಲೇಜುಗಳು ಕೊರೊನಾ ಹಿನ್ನೆಲೆ ಯಲ್ಲಿ ಸ್ಥಗಿತಗೊಂಡಿದ್ದಲ್ಲಿ ವಿಶೇಷ ಪ್ರಕರಣದಡಿ ವಿನಾಯಿತಿ ಕಲ್ಪಿಸಿ 2022-23ನೇ ಸಾಲಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸರಕಾರ ಅವಕಾಶ ಕೊಟ್ಟಿದೆ. ಕಾಲೇಜನ್ನು ಪುನಃ ಆರಂಭಿಸಲು ಇಚ್ಛಿಸಿದಲ್ಲಿ ಕಾಲೇಜಿನ ಮಂಜೂರಾತಿ ಆದೇಶ ಪ್ರತಿ, ಶೈಕ್ಷಣಿಕ ಮಾನ್ಯತೆ ಆದೇಶಪ್ರತಿ, 2016-17ನೇ ಸಾಲಿನ ಮಾನ್ಯತೆ ನವೀಕರಣ ಪ್ರತಿ, 2022-23ರಲ್ಲಿ ಮಾನ್ಯತೆ ಶುಲ್ಕ ಪಾವತಿಸಿರುವ ಚಲನ್‌, ಮಂಜೂರಾದ ಸಂಯೋ ಜನೆ ಮತ್ತು ವಿಭಾಗದ ಆದೇಶ ಪ್ರತಿ, 2017-18, 2018-19ರಲ್ಲಿ ಸಂಯೋಜನೆ, ವಿಭಾಗವಾರು ವಿದ್ಯಾರ್ಥಿಗಳ ದಾಖಲಾತಿ, ಫ‌ಲಿತಾಂಶದ ವಿವರ ಸಹಿತ ಅಗತ್ಯ ದಾಖಲೆಗಳನ್ನು ಜು. 16ರೊಳಗೆ ಇಲಾಖೆಗೆ ಸಲ್ಲಿಸ ಬೇಕು ಎಂದು ಇಲಾಖೆಯ ಅಧಿ ಕಾರಿಯೊಬ್ಬರು ತಿಳಿಸಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

17 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

17 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

18 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

18 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

18 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

19 hours ago