ದಕ್ಷಿಣ ಕನ್ನಡ : ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಕಾರ್ಡ್ , ಡೆಬಿಟ್- ಕ್ರೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ : ಸಿಎಂ ಬೊಮ್ಮಾಯಿ – Vishwanews24

Featured, ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಕಾರ್ಡ್ , ಡೆಬಿಟ್- ಕ್ರೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ : ಸಿಎಂ ಬೊಮ್ಮಾಯಿ

ದಕ್ಷಿಣ ಕನ್ನಡ : ಕಾಂಗ್ರೆಸ್ ನೀಡಿರುವ ಗ್ಯಾರಂಟಿ ನಕಾರ್ಡ್ ಡೆಬಿಟ್, ಕ್ರೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಂಗಳೂರಿನ ಮೇರಿ ಹಿಲ್ಸ್ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹತಾಶವಾಗಿದೆಯೇ ಏನೆಂಬ ಬಗ್ಗೆ ಮಾತನಾಡಿ ಏಕೆ ಹತಾಶರಾಗಬೇಕು. ಜನರೇ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇವರ ಮಾತಿನ ಮೇಲೆ ವಿಶ್ವಾಸ ವಿಲ್ಲ ಎಂದು ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ. ಗ್ಯಾರಂಟಿ ಕಾರ್ಡ್ ಹಿಂದೆ ಗೃಹ ಲಕ್ಷ್ಮಿ ಎಂದು ಬರೆದಿದ್ದಾರೆ. ಬ್ಯಾಂಕಿನಲ್ಲಿ ದುಡ್ಡಿಟ್ಟು ಕಾರ್ಡ್ ಕೊಟ್ಟರೆ ಬೆಲೆ ಇರುತ್ತದೆ ಎಂದರು.

ಮಾರ್ಚ್ 17 ಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಬಿಜೆಪಿ ಸಮೀಕ್ಷೆ ನಡೆಸುತ್ತಿದೆ. ಕಾಂಗ್ರೆಸ್ ಏನು ಮಾಡುತ್ತಾರೆ ಎನ್ನುವುದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ವೇಳಾಪಟ್ಟಿಯಂತೆ ನಾವು ಘೋಷಣೆ ಮಾಡುತ್ತೇವೆ ಎಂದರು.

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ – Vishwanews24

ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಕುರಿತಂತೆ ಮಾತನಾಡಿ ಪ್ರತಿ ಚುನಾವಣೆಯಲ್ಲೂ ಪಕ್ಷ ಹಲವಾರು ತೀರ್ಮಾನವನ್ನು ಗೆಲ್ಲಲು ಮಾಡುತ್ತಾರೆ. ಅದೇನೂ ಹೊಸತಲ್ಲ ಎಂದರು.

ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಕಾಂಗ್ರೆಸ್ ಎಲ್ಲದರಲ್ಲೂ ಮಾಡುತ್ತಿದೆ. ಟೋಲ್ ಬಗ್ಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಟೋಲ್ ಸಂಗ್ರಹವಾಗಿಲ್ಲವೇ? ಎಲ್ಲದರಲ್ಲೂ ರಾಜಕಾರಣ ಮಾಡುವ ಕೆಟ್ಟ ಪರಂಪರೆ ಕಾಂಗ್ರೆಸ್ ನಲ್ಲಿದೆ. ಸಮಸ್ಯೆ ಇದ್ದರೆ ಕುಳಿತು ಬಗೆಹರಿಸಬಹುದು. ಅವರು ಬಳಸುವ ಭಾಷೆ ಯಾವ ಕನ್ನಡಿಗರೂ ಒಪ್ಪುವುದಿಲ್ಲ. ಕಾಂಗ್ರೆಸ್ ನಲ್ಲಿ ಸಭ್ಯತೆಯ ದಿವಾಳಿಯಾಗಿದೆ ಎಂದರು.

ದ.ಕ , ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಖಾತೆ ತೆರೆಯುತ್ತೇವೆ : ಕುಮಾರಸ್ವಾಮಿ – Vishwanews24

 

Leave a Reply