ಮಂಗಳೂರು, : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರಿದಿದ್ದು, ಅಚ್ಚರಿಯ ರೀತಿಯಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೆಸರು ಪ್ರಸ್ತಾಪವಾಗಿದೆ. ಒಂದೆಡೆ ಕಾಂಗ್ರೆಸ್ ಮುಖಂಡರು ಜಾತಿ ಲೆಕ್ಕಾಚಾರ ಹಾಕುತ್ತಿದ್ದರೆ, ಮತ್ತೊಂದೆಡೆ ಖಾದರ್ ಹೆಸರು ಪ್ರಸ್ತಾಪವಾಗಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್ಗೆ ಟಿಕೆಟ್ ನೀಡಲು ಕೆಪಿಸಿಸಿಯಲ್ಲಿ ಚರ್ಚೆ ನಡೆದಿದೆ.
ಯುಟಿ ಖಾದರ್ ಅವರಿಗೆ ಮುಸ್ಲಿಂ ಮತಗಳಗಳನ್ನು ಕ್ಲೀನ್ ಸ್ವೀಪ್ ಮಾಡುವ ಸಾಮರ್ಥ್ಯ ಇದೆ. ಅದೇ ರೀತಿ ಹಿಂದು ಮತಗಳನ್ನೂ ಹೆಚ್ಚಾಗಿ ಸೆಳೆಯುವ ಶಕ್ತಿ ಇದೆ. ಇತ್ತೀಚಿಗೆ ಭೂತ ಕೋಲದಲ್ಲಿ ಭಾಗವಹಿಸಿ ಖಾದರ್ ಅವರು ಹಿಂದುಗಳ ಮನ ಗೆದ್ದಿದ್ದು ಕೂಡ ಇಲ್ಲಿ ಗಮನಾರ್ಹ. ಅದೇ ರೀತಿ ಖಾದರ್ ಹಲವು ಬಾರಿ ನಡೆದುಕೊಂಡಿದ್ದಾರೆ. ಹಿಂದೂ ದೇಗುಲಗಳಿಗೆ ಭೇಟಿ ನೀಡುವುದು, ಸಮಾರಂಭಗಳಲ್ಲಿ ಭಾಗವಹಿಸುವುದನ್ನು ಮಾಡಿದ್ದಾರೆ. ಜತೆಗೆ, ಅನೇಕ ಹಿಂದೂ ಮುಖಂಡರ ಜತೆಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇವೆಲ್ಲ ಅಂಶಗಳನ್ನೂ ಪರಿಗಣಿಸಲಾಗಿದೆ.
ಜಾತ್ಯತೀತ ನಡೆಯಿಂದ ಖಾದರ್ ಅವರಿಗೆ ಎಲ್ಲ ರೀತಿಯ ಓಟ್ ಬ್ಯಾಂಕ್ ಸೆಳೆಯುವ ಶಕ್ತಿ ಇದೆ ಎಂಬುದು ಅವರ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಜತೆಗೆ, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಅಭಿಪ್ರಾಯವೂ ಕ್ಷೇತ್ರದ ಜನತೆಯಲ್ಲಿದೆ. ಹೀಗಾಗಿ ಅವರ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಹಿಡಿತ ಸಾಧಿಸುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಎನ್ನಲಾಗಿದೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…