ಮಂಗಳೂರು\ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದೆ. ಮದೀನದಿಂದ ಮಾಹಿತಿ ಪಡೆದಿರುವ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್, ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದೆ. ಅಲ್ಲದೇ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವರ, ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಈ ಸಲುವಾಗಿ ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಎನ್ಡಿಆರ್ಎಫ್ ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಹೇಳಿದ್ದಾರೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…