ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಐಎಎಸ್‌ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ವೈಯಕ್ತಿಕ ಕಾರಣ ಎಂದು ತಿಳಿಸಿದ್ದಾರೆ.ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು  ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

2017ರ ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

2009 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೆಂಥಿಲ್ ತಮಿಳುನಾಡು ಮೂಲದವರಾಗಿದ್ದು, ಈ ಹಿಂದೆ ರಾಯಚೂರಿನ ಡಿಸಿ ಆಗಿ ಸೇವೆ ಸಲ್ಲಿಸಿದ್ದರು. ಅವರು ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರ್ ಪದವಿ ಹೊಂದಿದ್ದಾರೆ.