ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್ಪಿ ಯತೀಶ್ ಎನ್. ಅವರು ಅಧಿಕಾರ ಡಾ.ಅರುಣ್ ಕೆ. ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅದೇ ರೀತಿ ರೌಡಿ ಶೀಟರ್ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ವಹಿಸುತ್ತೇನೆ ಎಂದರು.
ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಮಾಹಿತಿಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಮುಕ್ತವಾಗಿ ತಮ್ಮ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆಗೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಡಾ.ಅರುಣ್ ಕೆ. ಮನವಿ ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…