ಬಂಟ್ವಾಳ: ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು , ಪ್ರಜ್ಞಾವಂತ ಯುವಕರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದು ಮಿಥುನ್ ರೈ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.
ಪಕ್ಷದ ಕಾರ್ಯಕರ್ತರು ಮತದಾರರು ನನ್ನ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸಕ್ಕೆ ಯಾವುದೇ ಚ್ಯುತಿ ಬರದಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತನೆ ಮಾಡಲು ನನಗೆ ಅವಕಾಶ ನೀಡಬೇಕು. ಈ ಚುನಾವಣೆ ಯಾವುದೇ ವೈಯಕ್ತಿಕ ಹೋರಾಟ ಅಲ್ಲ. ಇದು ನಮ್ಮೆಲ್ಲರ ಗೆಲುವು ಎಂದು ಭಾವಿಸಿ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ , ಮೈಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಬಿ.ಎಚ್.ಖಾದರ್ , ಚಿತ್ತರಂಜನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…