Featured

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ – vishwanews24

ದಕ್ಷಿಣ ಕನ್ನಡ  ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ

ಕಾರವಾರ : ದಕ್ಷಿಣ ಕನ್ನಡ  ಜಿಲ್ಲೆಯನ್ನು ಮಂಗಳೂರು ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ  ಹೇಳಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಸ್ಥಳದ ಹೆಸರನ್ನು ಯಾರು ಕೂಡ ಬದಲಿಸಬಾರದು. ಹೊಸ ಜಿಲ್ಲೆಯನ್ನು ಮಾಡುವುದಾದರೇ ಯಾವ ಹೆಸರನ್ನಾದರೂ ಇಡಲಿ. ಕನ್ನಡ ಎಂದಿದ್ದಕ್ಕೆ ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ ಕಾಸರಗೋಡು  ಬೇರೆಯಾಗಿರುತ್ತಿರಲಿಲ್ಲ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಗಡಿ ನಾಡು ಉತ್ಸವ ಮಾಡಲಾಗುವುದು. ಕನ್ನಡ ಹೊರತು ಪಡಿಸಿ ಅನ್ಯ ಭಾಷಿಕರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದೆ. ಬೇರೆ ರಾಜ್ಯಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.

36 ಗಂಟೆಯಲ್ಲಿ ಕನ್ನಡ ಕಲಿಯುವ ಯೋಜನೆ ರೂಪಿಸಿದ್ದೇವೆ. ಈಗಾಗಲೇ ಬೆಂಗಳೂರಿನಲ್ಲಿ 22 ಕಡೆ ಕನ್ನಡ ಕಲಿಕಾ ಕೇಂದ್ರ ಆರಂಭಿಸಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಕನ್ನಡದ ಐತಿಹಾಸಿಕ ಕುರುಹು ಇವೆ. ಐತಿಹಾಸಿಕ ಸ್ಥಳಗಳ ಕುರಿತು ಸಾರ್ವಜನಿಕರಿಗೆ ತಿಳಿಯುವಂತೆ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿ ಬಹಳ ವರ್ಷ ಕಳೆದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಮಾಡಲು ನಾವು ಆಗ್ರಹ ಮಾಡುತ್ತೇವೆ ಎಂದರು.

10ನೇ ತರಗತಿಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಫೇಲಾದವರು ಮಂಡ್ಯ, ಮೈಸೂರು ಭಾಗದವರೇ ಹೆಚ್ಚು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆ ಮಾತು ಕನ್ನಡ ಇರದೆ ಇದ್ದರೂ ಕನ್ನಡ ಭಾಷೆಯಲ್ಲಿ ಮಕ್ಕಳ ಪಾಸ್ ಆಗಿರುವ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕನ್ನಡ ಲಿಪಿಯ ಫಾಂಟ್ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ‌ .ಎ.ಐ ತಂತ್ರಜ್ಞಾನದ ಅನ್ಯ ಭಾಷೆಯಿಂದ ಕನ್ನಡಕ್ಕೆ ಭಾಷಾಂತರದ ಆಪ್ ಸಹ ಅಭಿವೃದ್ಧಿ ಮಾಡಲಾಗುತಿದ್ದು ನವೆಂಬರ್‌ನಲ್ಲಿ ಬಿಡುಗಡೆ ಮಾಡುತ್ತೇವೆ. ಬ್ಯಾಂಕ್ ಸಿಬ್ಬಂದಿ ಕನ್ನಡ ಮಾತನಾಡದಿರುವುದರಿಂದ ರಾಜ್ಯದಲ್ಲಿ 6 ಎಫ್‌ಐಆರ್‌ ದಾಖಲುಮಾಡಲಾಗಿದೆ ಎಂದು ಅವರು ಹೇಳಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

8 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

11 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

11 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

11 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

12 hours ago