Featured

ದಕ್ಷಿಣ ಕನ್ನಡ ಜಿಲ್ಲೆಯ ಜನ ಮೇಲೆ ನೋಡುತ್ತಲೆ ನಿಂತಿದ್ದಾರೆ , ಇನ್ನು ಕೂಡಾ ಕೆಳಗೆ ನೋಡಿಲ್ಲ : ರಮನಾಥ್ ರೈ -Vishwanews24

ಉಡುಪಿ: ಸಂಸದ ನಳೀನ್ ಕುಮಾರ್ ಕಟೀಲ್‍ಗೆ ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವ ರಮನಾಥ್ ರೈ ವ್ಯಂಗ್ಯವಾಡಿ ಆಕ್ರೋಶ ಹೊರಹಾಕಿದರು.

ಉಡುಪಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಸಾಧ್ಯವಾಗಿಲ್ಲ, ಇಲ್ಲಿನ ದಲಿತ ಹಿರಿಯ ಶಾಸಕರಿಗೂ ಸಚಿವ ಸ್ಥಾನ ನೀಡಿದೇ ಬಿಜೆಪಿ ಈ ಎರಡು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ 19 ಜನ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಒಬ್ಬರಿಗೂ ಸಚಿವ ಸ್ಥಾನ ನೀಡದೇ ಬಿಜೆಪಿ ಅನ್ಯಾಯ ಮಾಡಿದೆ ಎಂದು ಹೇಳಿದರು.

ಜಾಹಿರಾತು

ಮಹಾತ್ಮಾ ಗಾಂಧೀಜಿ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಕ್ಕೆ ಮೋದಿ, ಅಮಿತ್ ಶಾ ಇದನ್ನು ಸಹಿಸಲ್ಲ ಅಂತ ಅಂದು ಹೇಳಿದ್ದರು. ಆದ್ರೆ ಅಂತಹ ನಳಿನ್ ಕುಮಾರ್ ಕಟೀಲ್‍ಗೆ ಈಗ ಪ್ರಮೋಷನ್ ಆಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡಿದಕ್ಕೆ ಅಧ್ಯಕ್ಷಗಿರಿ ಸಿಕ್ಕಿದೆ. ಭಾರತೀಯ ಜೂಟ್ ಪಾರ್ಟಿಗೆ ಮಾತ್ರ ಇಂತಹ ಶಕ್ತಿ ಇರುವುದು ಎಂದು ವ್ಯಂಗ್ಯವಾಡಿದರು

ಜನ ನಳಿನ್ ಕುಮಾರ್ ಕಟೀಲ್ ಮುಖ ನೋಡಿ ವೋಟು ಕೊಟ್ಟಿಲ್ಲ. ಮೇಲಿನ ಮುಖ ನೋಡಿ ಮತ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮೇಲೆ ನೋಡುತ್ತಲೆ ನಿಂತಿದ್ದಾರೆ. ಇನ್ನು ಕೂಡಾ ಕೆಳಗೆ ನೋಡಿಲ್ಲ. ಆದ್ರೆ ಈಗ ಆಕಾಶ ನೋಡುವ ಪರಿಸ್ಥಿತಿ ಇಲ್ಲಿನ ಜನರಿಗಾಗಿದೆ ಎಂದರು. ನಳಿನ್ ಕುಮಾರ್ ಕಟೀಲ್ ಯಾವುದೇ ಸಾಧನೆ ಮಾಡಿದ ಚರಿತ್ರೆ ಇತಿಹಾಸ ಇಲ್ಲ ಎಂದು ಟೀಕೆ ಮಾಡಿದರು

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

23 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago