ಉಡುಪಿ: ಸಂಸದ ನಳೀನ್ ಕುಮಾರ್ ಕಟೀಲ್ಗೆ ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವ ರಮನಾಥ್ ರೈ ವ್ಯಂಗ್ಯವಾಡಿ ಆಕ್ರೋಶ ಹೊರಹಾಕಿದರು.
ಉಡುಪಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಸಾಧ್ಯವಾಗಿಲ್ಲ, ಇಲ್ಲಿನ ದಲಿತ ಹಿರಿಯ ಶಾಸಕರಿಗೂ ಸಚಿವ ಸ್ಥಾನ ನೀಡಿದೇ ಬಿಜೆಪಿ ಈ ಎರಡು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ 19 ಜನ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಒಬ್ಬರಿಗೂ ಸಚಿವ ಸ್ಥಾನ ನೀಡದೇ ಬಿಜೆಪಿ ಅನ್ಯಾಯ ಮಾಡಿದೆ ಎಂದು ಹೇಳಿದರು.
ಜಾಹಿರಾತು
ಮಹಾತ್ಮಾ ಗಾಂಧೀಜಿ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಕ್ಕೆ ಮೋದಿ, ಅಮಿತ್ ಶಾ ಇದನ್ನು ಸಹಿಸಲ್ಲ ಅಂತ ಅಂದು ಹೇಳಿದ್ದರು. ಆದ್ರೆ ಅಂತಹ ನಳಿನ್ ಕುಮಾರ್ ಕಟೀಲ್ಗೆ ಈಗ ಪ್ರಮೋಷನ್ ಆಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡಿದಕ್ಕೆ ಅಧ್ಯಕ್ಷಗಿರಿ ಸಿಕ್ಕಿದೆ. ಭಾರತೀಯ ಜೂಟ್ ಪಾರ್ಟಿಗೆ ಮಾತ್ರ ಇಂತಹ ಶಕ್ತಿ ಇರುವುದು ಎಂದು ವ್ಯಂಗ್ಯವಾಡಿದರು
ಜನ ನಳಿನ್ ಕುಮಾರ್ ಕಟೀಲ್ ಮುಖ ನೋಡಿ ವೋಟು ಕೊಟ್ಟಿಲ್ಲ. ಮೇಲಿನ ಮುಖ ನೋಡಿ ಮತ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮೇಲೆ ನೋಡುತ್ತಲೆ ನಿಂತಿದ್ದಾರೆ. ಇನ್ನು ಕೂಡಾ ಕೆಳಗೆ ನೋಡಿಲ್ಲ. ಆದ್ರೆ ಈಗ ಆಕಾಶ ನೋಡುವ ಪರಿಸ್ಥಿತಿ ಇಲ್ಲಿನ ಜನರಿಗಾಗಿದೆ ಎಂದರು. ನಳಿನ್ ಕುಮಾರ್ ಕಟೀಲ್ ಯಾವುದೇ ಸಾಧನೆ ಮಾಡಿದ ಚರಿತ್ರೆ ಇತಿಹಾಸ ಇಲ್ಲ ಎಂದು ಟೀಕೆ ಮಾಡಿದರು
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…