Featured

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ :ಲಕ್ಷ್ಮಣ ಸವದಿ -Vishwanews24

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ :ಲಕ್ಷ್ಮಣ ಸವದಿ -Vishwanews24

ಮಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕಾರ್ಯಗಳು ವೇಗಪಡೆದುಕೊಂಡಿವೆ. ಬಜೆಟ್ ನಂತರ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ. ಅಲ್ಲದೆ ಸಾರಿಗೆ ನೌಕರರ ಪ್ರಮುಖ 10 ಬೇಡಿಕೆಗಳಲ್ಲಿ ಈಗಾಗಲೇ 9 ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕೊರೋನಾ ಲಾಕ್ ಡೌನ್ ಸಂದರ್ಭವೂ ಸಾರಿಗೆ ನೌಕರರ ಪೂರ್ಣ ವೇತನವನ್ನು ನೀಡಲಾಗಿತ್ತು. ಅವರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿದೆ. ನೌಕರರ ಬಾಕಿ ಉಳಿದ ವೇತನವನ್ನು ಮೂರು -ನಾಲ್ಕು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದವರು ಹೇಳಿದರು.

ಉಡುಪಿ : ಗಾಂಧೀಜಿ ಪುಣ್ಯಸ್ಮರಣೆ – ಮಹಾತ್ಮಾ ಗಾಂಧಿಜಿಯವರ ತತ್ವಾದರ್ಶಗಳು ಮತ್ತು ನಾಯಕತ್ವ ಸಮಾಜಕ್ಕೆ ಎಂದೆಂದಿಗೂ ಪ್ರಸ್ತುತವಾಗಿದೆ : ವಿನಯ ಕುಮಾರ್ ಸೊರಕೆ -Vishwanews24

ಕೊರೋನಾ ಕಾರಣದಿಂದ ಕೆಲವು ತಿಂಗಳ ಕಾಲ ಅಭಿವೃದ್ಧಿ ಕಾರ್ಯಗಳಿಗೆ ತಡೆ ಉಂಟಾಗಿತ್ತು.ಇದೀಗ ವೇಗ ಪಡೆದುಕೊಂಡಿದೆ. ಬಜೆಟ್ ನಂತರ ಎಲ್ಲಾ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಸಚಿವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ. ಎಂಟು ಕ್ಷೇತ್ರಗಳ ಪೈಕಿ7 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಇಲ್ಲಿನ ಕಾರ್ಯಕರ್ತರು ಗೆಲ್ಲಿಸಿದ್ದಾರೆ. ಅವಿರತ ಶ್ರಮ ಮತ್ತು ಬದ್ಧತೆಯಿಂದ ಇದು ಸಾಧ್ಯವಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಇದೇ ಸಂದರ್ಭ ಅವರನ್ನು ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ದಕ್ಷಿಣ ಮಂಡಲದಿಂದ ಗೌರವಿಸಲಾಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ , ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಮತ್ತಿತರರು ಉಪಸ್ಥಿತರಿದ್ದರು.

ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

Vishwa News 24

Recent Posts

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

5 minutes ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

1 hour ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

2 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

2 hours ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

2 hours ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

2 hours ago