ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾಕ್ಕೆ ಆಯ್ಕೆಯಾಗಿವೆ. 2018-19ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತ್ರಿ ಐದು ಗ್ರಾಪಂಗಳು ಆಯ್ಕೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ, ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮಪಂಚಾಯತ್, ಬಂಟ್ವಾಳದಿಂದ ವಿಟ್ಲ ತಾಲೂಕಿನ ಪಡ್ನೂರು, ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ, ಬೆಳ್ತಂಗಡಿಯಿಂದ ಮಡಂತ್ಯಾರು ಹಾಗೂ ಸುಳ್ಯದಿಂದ ಕಲ್ಮಡ್ಕ ‘ಗಾಂಧಿ ಗ್ರಾಮ ಪುರಸ್ಕಾರ’ ಕ್ಕೆ ಆಯ್ಕೆಯಾಗಿವೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜಯಂತಿ ಅಕ್ಟೊಬರ್ 2 ರಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದಲ್ಲಿ ಈ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಪುರಸ್ಕಾರ ಪಡೆಯಲಿರುವ ಗ್ರಾಮ ಪಂಚಾಯತ್ ಗಳು ತಮ್ಮ ಕಾರ್ಯಕ್ಷಮತೆ ಮತ್ತು ಆವಿಷ್ಕಾರ ಗಳಿಗೆ ಪ್ರೋತ್ಸಾಹ ರೂಪದಲ್ಲಿ ತಲಾ ರೂಪಾಯಿ 5 ಲಕ್ಷ ನಗದು ಪುರಸ್ಕಾರ ಪಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಶಸ್ತಿಯ 5 ಲಕ್ಷ ರು. ಪ್ರೋತ್ಸಾಹ ಧನದಲ್ಲಿ ಗ್ರಾಮ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ, ಸರ್ಕಾರಿ ಶಾಲೆಗೆ ಆಟದ ಮೈದಾನ, ಸೋಲಾರ್ ದೀಪ ಅಳವಡಿಕೆ, ಗ್ರಾಮೀಣ ಗೌರವ ಯೋಜನೆ ಸೇರಿದಂತೆ ಹತ್ತಾರು ಮೂಲಭೂತ ಸವಲತ್ತುಗಳ ಅಭಿವೃದ್ಧಿಗೆ ಬಳಸಿಕೊಳ್ಳಬಹುದಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…