ಮಂಗಳೂರು, : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. ಮಾತ್ರವಲ್ಲ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಪ್ರತಿಕ್ರಿಯಿಸಿದ್ದು, ಮತದಾರರು ತನ್ನ ಅಭ್ಯರ್ಥಿತನದ ಮೇಲೆ ವಿಶ್ವಾಸವಿರಿಸಿ ಮತ ಚಲಾಯಿಸಿರುವುದು ಸಂತಸ ತಂದಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದಲ್ಲದೆ, ತನಗೆ ಮತ ನೀಡಿ ಆಶೀರ್ವದಿಸಿದ ಎಲ್ಲರಿಗೂ ಆಭಾರಿಯಾಗಿರುತ್ತೇನೆ ಎಂದು ಧನ್ಯವಾದಗಳನ್ನು ಹೇಳಿದ್ದಾರೆ.
ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತ ಮತ್ತು ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸಲು ಶ್ರಮಿಸಿದ ಅಧಿಕಾರಿ ವರ್ಗಕ್ಕೂ, ಅದೇ ರೀತಿಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…