Featured

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ ಅಭ್ಯರ್ಥಿ ಮಧು ಜಿ. ಮಾದೇಗೌಡಗೆ ದಾಖಲೆಯ ಗೆಲುವು – Vishwnaews24

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ ಅಭ್ಯರ್ಥಿ ಮಧು ಜಿ. ಮಾದೇಗೌಡಗೆ ದಾಖಲೆಯ ಗೆಲುವು

ಮೈಸೂರು: ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದರು.

ಜೆಡಿಎಸ್ – ಬಿಜೆಪಿ ಕೋಟೆಯನ್ನು ಕಾಂಗ್ರೆಸ್ ಛಿದ್ರ ಮಾಡಿದ್ದು, ಮೈಸೂರು ಭಾಗದಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಡಿತ ಸಾಧಿಸಿದ್ದಾರೆ. ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೆ ಜೆಡಿಎಸ್ ಮೂರನೇ ಸ್ಥಾನವನ್ನು ಪಡೆದಿದೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿಗೆ ನಿಗದಿಪಡಿಸಿದ್ದ ಕೋಟಾವನ್ನು ಯಾವೊಬ್ಬ ಅಭ್ಯರ್ಥಿಯೂ ಪಡೆದಿರಲಿಲ್ಲ. ಹೀಗಾಗಿ ಎಲಿಮಿನೇಷನ್ ಪ್ರಕ್ರಿಯೆಯನ್ನು ನಡೆಸಲಾಗಿತ್ತು. ಒಟ್ಟಾರೆಯಾಗಿ ಮಧು ಮಾದೇಗೌಡ 12,205 ಮತಗಳ ಭಾರಿ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು.

ಮಧು ಜಿ. ಮಾದೇಗೌಡ ಒಟ್ಟು 45,275 ಮತಗಳನ್ನು ಪಡೆದುಕೊಂಡಿದ್ದರು. ಆದರೆ ಗೆಲುವಿಗೆ ನಿಗದಿಯಾದ 46,083 ಮತಗಳ ಕೋಟಾವನ್ನು ತಲುಪಲು 808 ಮತಗಳ ಕೊರತೆ ಎದುರಾಗಿತ್ತು. ಇದೇ ವೇಳೆ ಚುನಾವಣಾ ಆಯೋಗದ ನಿರ್ದೇಶನದಂತೆ ಮಧು ಜಿ. ಮಾದೇಗೌಡ ಪ್ರತಿಸ್ಪರ್ಧಿ ಬಿಜೆಪಿ ಮೈ. ವಿ. ರವಿಶಂಕರ್ ಎಲಿಮಿನೆಟ್ ಮಾಡಿ ಅಲ್ಲಿಂದ 808 ಪಡೆಯಲಾಯಿತು. ನಿಗದಿತ ಕೋಟಾ ತಲುಪುತ್ತಿದ್ದಂತೆಯೇ ಎಣಿಕೆ ಕಾರ್ಯ ನಿಲ್ಲಿಸಿ, ಮಧು ಅವರನ್ನು ವಿಜೇತ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಯಿತು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

15 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

15 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

15 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago