ದಕ್ಷಿಣ ಕನ್ನಡ

ದಕ್ಷಿಣ ಭಾರತದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಮಂಗಳೂರು : ದಕ್ಷಿಣ ಭಾರತದ ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ವಿಮಾನ ನಿಲ್ದಾಣವಾಗಿ ಮಂಗಳೂರು ವಿಮಾನ ನಿಲ್ದಾಣ ತನ್ನನ್ನು ಗುರುತಿಸಿಕೊಳ್ಳುತ್ತಿದೆ. ಕಳೆದೊಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 30ರಷ್ಟು ಏರಿಕೆ ಕಂಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 2016-17ರಲ್ಲಿ ಒಟ್ಟು 17.5 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರೆ, 2017-18ರಲ್ಲಿ ಈ ಸಂಖ್ಯೆ 23.4 ಲಕ್ಷಕ್ಕೇರಿದೆ. ಈಗ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 60ಕ್ಕೂ ಹೆಚ್ಚು ವಿಮಾನಗಳ ಸಂಚಾರವಿದ್ದು, ಮುಂದಿನ ಕೆಲವು ದಿನಗಳಲ್ಲಿ ಈ ಸಂಖ್ಯೆ 80ಕ್ಕೇರಲಿದೆ.

“ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಸಾಗುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಹಾಗೂ ವಿಮಾನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಗಮನಿಸಿ ಇಲ್ಲಿನ ಟರ್ಮಿನಲ್ ಕಟ್ಟಡದ ವಿಸ್ತೀರ್ಣವನ್ನು ಮುಂದಿನ ಕೆಲವು ವರ್ಷಗಳಲ್ಲಿ ಒಂದೂವರೆ ಪಟ್ಟು ಹೆಚ್ಚಿಸುವ ಪ್ರಸ್ತಾಪವಿದೆ” ಎಂದು ನಿರ್ದೇಶಕ ವಾಸಂಸೆಟ್ಟಿ ವೆಂಕಟೇಶ್ವರ ರಾವ್ ಹೇಳಿದ್ದಾರೆ. ಸದ್ಯ ಈ ಪ್ರಕ್ರಿಯೆ ಟೆಂಡರ್ ಹಂತದಲ್ಲಿದ್ದು ಕಾರ್ಯಾರಂಭಗೊಂಡ 18 ತಿಂಗಳೊಳಗಾಗಿ ಮುಗಿಸುವ ಅಂದಾಜಿದೆ.

ಪರ್ಯಾಯ ಟ್ಯಾಕ್ಸಿ ಟ್ರ್ಯಾಕ್ ಮೊದಲನೇ ಹಂತ ಈಗಾಗಲೇ ಪೂರ್ಣಗೊಂಡು ಕಾರ್ಯಾಚರಿಸುತ್ತಿರುವುದರಿಂದ ಪ್ರತಿ ಗಂಟೆಗೆ ನಿರ್ವಹಿಸಬಹುದಾದ ವಿಮಾನಗಳ ಸಂಖ್ಯೆ ಹಿಂದಿನ 10ರಿಂದ 14ಕ್ಕೇರಿದೆ. ಈ ಯೋಜನೆಯ ಎರಡನೇ ಹಂತ ಪೂರ್ಣಗೊಂಡಾಗ ಪ್ರತಿ ಗಂಟೆಯಲ್ಲಿ 17 ವಿಮಾನಗಳನ್ನು ನಿರ್ವಹಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಸುರಕ್ಷತಾ ಕ್ರಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರನ್-ವೇ ಬದಿಯ ಬೇಸಿಕ್ ಸ್ಟ್ರಿಪ್ ಅಗಲವನ್ನು 75 ಮೀಟರಿನಿಂದ 150 ಮೀಟರಿಗೆ ಹೆಚ್ಚಿಸಲಾಗಿದೆ. ಭದ್ರತಾ ವ್ಯವಸ್ಥೆಗಳೂ ಇನ್ನಷ್ಟು ಆಧುನಿಕಗೊಂಡಿದ್ದು ಸರ್ವೇಲೆನ್ಸ್ ಹಾಗೂ ಮೊನೋಪಲ್ಸ್ ಸರ್ವೇಲೆನ್ಸ್ ರಾಡಾರ್ ಹಾಗೂ ಡಿವಿಓಆರ್ ಇವುಗಳನ್ನು ಅಳವಡಿಸಲಾಗಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

15 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

15 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

17 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

17 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

17 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

18 hours ago