Featured

ದಕ್ಷಿಣ ಭಾರತದಲ್ಲಿ ಕಮಲ ಅರಳಿಸಲು ಬಿಜೆಪಿ ಆರ್‌ಎಸ್‌ಎಸ್‌ ಜೊತೆ ಅಮಿತ್ ಶಾ ಮಾಸ್ಟರ್ ಪ್ಲಾನ್..

ಮಂಗಳೂರು : ದಕ್ಷಿಣ ಭಾರತದಲ್ಲಿ ಬಿಜೆಪಿ ನೆಲೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಆರ್‌ಎಸ್‌ಎಸ್‌ ರಣತಂತ್ರ ರೂಪಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಉಪಸ್ಥಿತಿಯಲ್ಲಿ ಬುಧವಾರ ರಾತ್ರಿ ನಡೆದ ಆರ್‌ಎಸ್‌ಎಸ್‌ ದಕ್ಷಿಣ ಭಾರತ ಪ್ರಚಾರ ಬೈಠಕ್ನಲ್ಲಿ ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ನೆಲೆಯನ್ನು ಗಟ್ಟಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆದಿದೆ.

ಶಬರಿಮಲೆ ವಿಷಯದಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ನಡೆದುಕೊಂಡ ರೀತಿಯನ್ನೇ ಪ್ರಮುಖ ವಿಷಯವನ್ನಾಗಿ ಮಾಡಲು ನಿರ್ಧರಿಸಿ, ಹಿಂದೂಗಳ ಭಾವನೆಗೆ ಸ್ಪಂದಿಸಿ ಅದನ್ನು ರಕ್ಷಿಸುವುದರ ಜತೆಗೆ ಕೇರಳ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸುವ ಕೆಲಸವೂ ಆಗಬೇಕು ಎಂಬ ಮಾತುಗಳು ಕೇಳಿ ಬಂದಿವೆ. ಕೇರಳದಲ್ಲಿ ಬಿಜೆಪಿ ನೆಲೆಯನ್ನು ವಿಸ್ತರಿಸಲು ಕಾರ್ಯಯೋಜನೆ ರೂಪಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ಆರ್‌ಎಸ್‌ಎಸ್‌ ಪ್ರಮುಖರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎನ್‌ಡಿಎ ಮೈತ್ರಿಕೂಟದಿಂದ ಹೊರಹೋಗಿದ್ದು, ಅಲ್ಲಿಯೂ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ. ಇದಕ್ಕಾಗಿ ಸೂಕ್ತ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳಬೇಕು. ತಮಿಳುನಾಡು, ತೆಲಂಗಾಣದಲ್ಲಿಯೂ ಪಕ್ಷದ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು. ಇದೆಲ್ಲವನ್ನೂ ಹಿಂದುತ್ವದ ಆಧಾರದಲ್ಲಿಯೇ ಕಾರ್ಯಗತಗೊಳಿಸಲು ಸಂಘದ ಪ್ರಮುಖರು ಸೂಚನೆ ನೀಡಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು :ಪ್ರಮುಖವಾಗಿ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹಿಂದೂಗಳಿಗೆ ಭಾವನಾತ್ಮಕ ವಿಷಯವಾಗಿರುವ ರಾಮಮಂದಿರ ನಿರ್ಮಾಣವನ್ನು 2019 ರ ಲೋಕಸಭೆ ಚುನಾವಣೆಗೂ ಮೊದಲೇ ಕಾರ್ಯರೂಪಕ್ಕೆ ತರಬೇಕು ಎನ್ನುವ ಒತ್ತಾಯವನ್ನು  ಹಾಗೂ ಸಂಘದ ಪ್ರಮುಖರ ಸಲಹೆಗಳನ್ನು ಆಲಿಸಿದ ಅಮಿತ್‌ ಶಾ, ರಾಮಮಂದಿರ ಸೂಕ್ಷ್ಮ ವಿಷಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾಗಿದೆ. ಈ ಕುರಿತು ವರಿಷ್ಠರ ಜತೆ ಚರ್ಚಿಸಿ, ಲೋಕಸಭೆ ಚುನಾವಣೆಗೂ ಮುನ್ನವೇ ಸ್ಪಷ್ಟ ನಿರ್ಧಾರಕ್ಕೆ ಬರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಆರ್‌ಎಸ್‌ಎಸ್‌ ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್‌ನ ಸರ ಕಾರ್ಯವಾಹ ಭಯ್ಯಾಜಿ ಸುರೇಶ್‌ ಜೋಷಿ, ಮುಕುಂದ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ನಾಲ್ಕು ರಾಜ್ಯಗಳ ಸಂಘಟನಾ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

11 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

13 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

13 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

13 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

14 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

14 hours ago