ಬೆಳಗಾವಿ: ಚಿಕ್ಕಮಗಳೂರು ತಾಲ್ಲೂಕು ಬಾಬಾಬುಡನ್ಗಿರಿಯಲ್ಲಿರುವ ದತ್ತಪೀಠವನ್ನು ಶೀಘ್ರ ಹಿಂದೂಗಳಿಗೆ ಹಸ್ತಾಂತರಿಸಬೇಕೆಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ದತ್ತಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೆ ಬೇಗನೇ ಬರಲಿ ಎಂದು ಪ್ರಾರ್ಥಿಸಿದರು.
ದತ್ತಾತ್ರೇಯ ಅನುಗ್ರಹದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸಿದರೆ ಅದಕ್ಕೆ ದತ್ತನ ಶಾಪ ತಟ್ಟಲಿ ಎಂದು ಕಿಡಿಕಾರಿದರು.
ದತ್ತಪೀಠದ ಹೋರಾಟದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂತು. ಸಿ.ಟಿ. ರವಿ, ಸುನಿಲ್ ಕುಮಾರ್ ದತ್ತಪೀಠದ ಹೋರಾಟದಿಂದಲೇ ಶಾಸಕರು, ಸಚಿವರಾದವರು. ಆದರೆ ದತ್ತಪೀಠಕ್ಕೆ ಮುಕ್ತಿ ಕೊಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿಲ್ಲ ಎಂದು ವಿಷಾದಿಸಿದರು.
ದತ್ತಪೀಠವನ್ನ ಹಿಂದೂಗಳಿಗೆ ಕೊಡಬೇಕು, ಅಲ್ಲಿರುವ ಸಮಾಧಿಗಳನ್ನು ಸ್ಥಳಾಂತರಿಸಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…