Featured

ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೆ ಬೇಗನೇ ಬರಲಿ : ಪ್ರಮೋದ್ ಮುತಾಲಿಕ್ -Vishwanews24

ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೆ ಬೇಗನೇ ಬರಲಿ : ಪ್ರಮೋದ್ ಮುತಾಲಿಕ್ -Vishwanews24

ಬೆಳಗಾವಿ: ಚಿಕ್ಕಮಗಳೂರು ತಾಲ್ಲೂಕು ಬಾಬಾಬುಡನ್​ಗಿರಿಯಲ್ಲಿರುವ ದತ್ತಪೀಠವನ್ನು ಶೀಘ್ರ ಹಿಂದೂಗಳಿಗೆ ಹಸ್ತಾಂತರಿಸಬೇಕೆಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ದತ್ತಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೆ ಬೇಗನೇ ಬರಲಿ ಎಂದು ಪ್ರಾರ್ಥಿಸಿದರು.

ದತ್ತಾತ್ರೇಯ ಅನುಗ್ರಹದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸಿದರೆ ಅದಕ್ಕೆ ದತ್ತನ ಶಾಪ ತಟ್ಟಲಿ ಎಂದು ಕಿಡಿಕಾರಿದರು.

ದತ್ತಪೀಠದ ಹೋರಾಟದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂತು. ಸಿ.ಟಿ. ರವಿ‌, ಸುನಿಲ್ ಕುಮಾರ್ ದತ್ತಪೀಠದ ಹೋರಾಟದಿಂದಲೇ ಶಾಸಕರು, ಸಚಿವರಾದವರು. ಆದರೆ ದತ್ತಪೀಠಕ್ಕೆ ಮುಕ್ತಿ ಕೊಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿಲ್ಲ ಎಂದು ವಿಷಾದಿಸಿದರು.

ದತ್ತಪೀಠವನ್ನ ಹಿಂದೂಗಳಿಗೆ ಕೊಡಬೇಕು, ಅಲ್ಲಿರುವ ಸಮಾಧಿಗಳನ್ನು ಸ್ಥಳಾಂತರಿಸಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago