ಬೆಳಗಾವಿ: ಚಿಕ್ಕಮಗಳೂರು ತಾಲ್ಲೂಕು ಬಾಬಾಬುಡನ್ಗಿರಿಯಲ್ಲಿರುವ ದತ್ತಪೀಠವನ್ನು ಶೀಘ್ರ ಹಿಂದೂಗಳಿಗೆ ಹಸ್ತಾಂತರಿಸಬೇಕೆಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ದತ್ತಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೆ ಬೇಗನೇ ಬರಲಿ ಎಂದು ಪ್ರಾರ್ಥಿಸಿದರು.
ದತ್ತಾತ್ರೇಯ ಅನುಗ್ರಹದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸಿದರೆ ಅದಕ್ಕೆ ದತ್ತನ ಶಾಪ ತಟ್ಟಲಿ ಎಂದು ಕಿಡಿಕಾರಿದರು.
ದತ್ತಪೀಠದ ಹೋರಾಟದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂತು. ಸಿ.ಟಿ. ರವಿ, ಸುನಿಲ್ ಕುಮಾರ್ ದತ್ತಪೀಠದ ಹೋರಾಟದಿಂದಲೇ ಶಾಸಕರು, ಸಚಿವರಾದವರು. ಆದರೆ ದತ್ತಪೀಠಕ್ಕೆ ಮುಕ್ತಿ ಕೊಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿಲ್ಲ ಎಂದು ವಿಷಾದಿಸಿದರು.
ದತ್ತಪೀಠವನ್ನ ಹಿಂದೂಗಳಿಗೆ ಕೊಡಬೇಕು, ಅಲ್ಲಿರುವ ಸಮಾಧಿಗಳನ್ನು ಸ್ಥಳಾಂತರಿಸಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…