ಚಿಕ್ಕಮಗಳೂರು: ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನ (ನವೆಂಬರ್ 10 ರಂದು) ದತ್ತಪೀಠಕ್ಕೆ ಆಗಮಿಸುತ್ತಾರೆ. ಅಂದು, ದತ್ರಪೀಠದಲ್ಲಿ ಹೋಮ-ಹವನ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಏಳು ದಿನಗಳ ಕಾಲ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಅಲ್ಲದೇ, ಮುಂಜಾಗ್ರತ ಕ್ರಮವಾಗಿ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಮತ್ತು ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ.
ದತ್ತ ಮಾಲಾಧಾರಿಗಳು ನವೆಂಬರ್ 10ರಂದು ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ತಾಣಗಳಿಗೆ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕೆ ಆಗ್ರಹಿಸಿ ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆತಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಶ್ರೀಗುರುದತ್ತಾತ್ರೇಯರ ಭಕ್ತರು ಮಾಲೆ ಧರಿಸಿ, ಏಳು ದಿನಗಳ ಕಾಲ ವ್ರತಾಚರಣೆಯಲ್ಲಿರುತ್ತಾರೆ. ಏಳನೇ ದಿನ ದತ್ತಪೀಠಕ್ಕೆ ಭೇಟಿ ನೀಡುತ್ತಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…