Featured

ದರ್ಶನ್​ ಪರ ವಕೀಲರಾಗಿ ಫೇಮಸ್​ ಕ್ರಿಮಿನಲ್​ ಲಾಯರ್​​ ಸಿ.ವಿ ನಾಗೇಶ್​ ನೇಮಕ – vishwanews24

ನಲಪಾಡ್, ರೇವಣ್ಣಗೆ ಜಾಮೀನು ಕೊಡಿಸಿದ್ದ ಹಿರಿಯ ವಕೀಲರಿಂದ ದರ್ಶನ್ ಪರ ವಾದ

ದರ್ಶನ್ ಪರವಾಗಿ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ನೇಮಿಸಲಾಗಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಎಚ್​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಿಸಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ.

ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ. ಒಬ್ಬ ಆರೋಪಿಯ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶವೂ ಇದೆ. ಅಥವಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಸಿವಿ ನಾಗೇಶ್ ಅವರ ಸಹಾಯಕ ವಕೀಲರಾಗಿರುವ ರಾಘವೇಂದ್ರ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ ನಟ ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ಜಾಮೀನು ಅರ್ಜಿಯನ್ನು ಹಾಕಲು ಸಕಲ ತಯಾರಿ ನಡೆಸಿರುವುದಾಗಿ ತಿಳಿಸಿದ್ದು, ಅದಕ್ಕೆ ಬೇಕಿರುವ ಅಗತ್ಯ ಮಾಹಿತಿಯನ್ನು ದರ್ಶನ್ ಅವರಿಂದ ಪಡೆದುಕೊಂಡಿದ್ದಾರೆ. ರಿಮ್ಯಾಂಡ್ ಶೀಟ್ ಇನ್ನಿತರೆಗಳನ್ನು ಪೊಲೀಸರಿಂದ ಪಡೆದುಕೊಂಡಿದ್ದು, ಜೂನ್ 22 ರಂದೇ ಸಿವಿ ನಾಗೇಶ್ ಅವರು ತಮ್ಮ ವಾದ ಮಂಡಿಸಲಿದ್ದಾರೆ.

ಸಿವಿ ನಾಗೇಶ್ ಅವರು ಹೈಕೋರ್ಟ್​ನ ಹಿರಿಯ ವಕೀಲರಾಗಿದ್ದು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಅಪಹರಣ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಜೈಲು ಪಾಲಾದಾಗಿದ್ದಾಗ ಅವರ ಪರ ವಾದ ಮಂಡಿಸಿ ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ದೊರಕಿಸಿದರು. ಭವಾನಿ ರೇವಣ್ಣ ಜೈಲು ಪಾಲಾಗದಂತೆ ತಡೆಯುವಲ್ಲಿಯೂ ನಾಗೇಶ್ ಅವರ ಪಾತ್ರವಿದೆ ಎನ್ನಲಾಗುತ್ತಿದೆ. ಹಲ್ಲೆ ಆರೋಪದಲ್ಲಿ ಜೈಲುಪಾಲಾಗಿದ್ದ ಮೊಹಮ್ಮದ್ ನಲಪಾಡ್ ಪರವಾಗಿಯೂ ನಾಗೇಶ್ ಅವರೇ ವಾದ ಮಂಡಿಸಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago