Featured

ದರ್ಶನ್​ ಪರ ವಕೀಲರಾಗಿ ಫೇಮಸ್​ ಕ್ರಿಮಿನಲ್​ ಲಾಯರ್​​ ಸಿ.ವಿ ನಾಗೇಶ್​ ನೇಮಕ – vishwanews24

ನಲಪಾಡ್, ರೇವಣ್ಣಗೆ ಜಾಮೀನು ಕೊಡಿಸಿದ್ದ ಹಿರಿಯ ವಕೀಲರಿಂದ ದರ್ಶನ್ ಪರ ವಾದ

ದರ್ಶನ್ ಪರವಾಗಿ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ನೇಮಿಸಲಾಗಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಎಚ್​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಿಸಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ.

ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ. ಒಬ್ಬ ಆರೋಪಿಯ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶವೂ ಇದೆ. ಅಥವಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಸಿವಿ ನಾಗೇಶ್ ಅವರ ಸಹಾಯಕ ವಕೀಲರಾಗಿರುವ ರಾಘವೇಂದ್ರ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ ನಟ ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ಜಾಮೀನು ಅರ್ಜಿಯನ್ನು ಹಾಕಲು ಸಕಲ ತಯಾರಿ ನಡೆಸಿರುವುದಾಗಿ ತಿಳಿಸಿದ್ದು, ಅದಕ್ಕೆ ಬೇಕಿರುವ ಅಗತ್ಯ ಮಾಹಿತಿಯನ್ನು ದರ್ಶನ್ ಅವರಿಂದ ಪಡೆದುಕೊಂಡಿದ್ದಾರೆ. ರಿಮ್ಯಾಂಡ್ ಶೀಟ್ ಇನ್ನಿತರೆಗಳನ್ನು ಪೊಲೀಸರಿಂದ ಪಡೆದುಕೊಂಡಿದ್ದು, ಜೂನ್ 22 ರಂದೇ ಸಿವಿ ನಾಗೇಶ್ ಅವರು ತಮ್ಮ ವಾದ ಮಂಡಿಸಲಿದ್ದಾರೆ.

ಸಿವಿ ನಾಗೇಶ್ ಅವರು ಹೈಕೋರ್ಟ್​ನ ಹಿರಿಯ ವಕೀಲರಾಗಿದ್ದು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಅಪಹರಣ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಜೈಲು ಪಾಲಾದಾಗಿದ್ದಾಗ ಅವರ ಪರ ವಾದ ಮಂಡಿಸಿ ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ದೊರಕಿಸಿದರು. ಭವಾನಿ ರೇವಣ್ಣ ಜೈಲು ಪಾಲಾಗದಂತೆ ತಡೆಯುವಲ್ಲಿಯೂ ನಾಗೇಶ್ ಅವರ ಪಾತ್ರವಿದೆ ಎನ್ನಲಾಗುತ್ತಿದೆ. ಹಲ್ಲೆ ಆರೋಪದಲ್ಲಿ ಜೈಲುಪಾಲಾಗಿದ್ದ ಮೊಹಮ್ಮದ್ ನಲಪಾಡ್ ಪರವಾಗಿಯೂ ನಾಗೇಶ್ ಅವರೇ ವಾದ ಮಂಡಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago