ಬೆಂಗಳೂರು: ದರ್ಶನ್ ಕೇಸ್ ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ ಸಿಎಂ ಯಾರಿಗೂ ಸೊಪ್ಪು ಹಾಕಲ್ಲ, ಯಾರೂ ಕೂಡ ನಮ್ಮ ಹತ್ರ ಬಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಅಂದರು.
ಇನ್ನು ಬಿಜೆಪಿ ಶಾಸಕರೊಬ್ಬರ ಸಂಬಂಧಿ ದರ್ಶನ್ ಕೇಸ್ ಪ್ರಕರಣದಲ್ಲಿ ಭಾಗಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಇರಬಹುದೇನೋ ಗೊತ್ತಿಲ್ಲ. ಪಕ್ಷದ ಆಧಾರದ ಮೇಲೆ ಈ ಕೇಸ್ ನೊಡ್ತಾ ಇಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಯಾರು ಏನು ತಪ್ಪು ಮಾಡಿದ್ದಾರೆ ಅದರ ಮೇಲೆ ಹೋಗುತ್ತದೆ ಅಂದರು.
ದರ್ಶನ್ ಸೇರಿ ನಾಲ್ಕು ಜನರನ್ನ ನಿನ್ನೆ ಒಂದು ವಾರ ಕಸ್ಟಡಿಗೆ ಕೇಳಿದ್ದರು. ಆದರೆ ಎರಡು ದಿನ ಕೊಟ್ಟಿದ್ದಾರೆ. ಅಷ್ಟರಲ್ಲಿ ವಿಚಾರಣೆ ಮುಗಿದ್ರೆ ನ್ಯಾಯಾಂಗದ ವಶಕ್ಕೆ ಕೊಡ್ತಾರೆ ಅಂತಾ ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…