ಬೆಂಗಳೂರು: ದರ್ಶನ್ ಕೇಸ್ ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ ಸಿಎಂ ಯಾರಿಗೂ ಸೊಪ್ಪು ಹಾಕಲ್ಲ, ಯಾರೂ ಕೂಡ ನಮ್ಮ ಹತ್ರ ಬಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಅಂದರು.
ಇನ್ನು ಬಿಜೆಪಿ ಶಾಸಕರೊಬ್ಬರ ಸಂಬಂಧಿ ದರ್ಶನ್ ಕೇಸ್ ಪ್ರಕರಣದಲ್ಲಿ ಭಾಗಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಇರಬಹುದೇನೋ ಗೊತ್ತಿಲ್ಲ. ಪಕ್ಷದ ಆಧಾರದ ಮೇಲೆ ಈ ಕೇಸ್ ನೊಡ್ತಾ ಇಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಯಾರು ಏನು ತಪ್ಪು ಮಾಡಿದ್ದಾರೆ ಅದರ ಮೇಲೆ ಹೋಗುತ್ತದೆ ಅಂದರು.
ದರ್ಶನ್ ಸೇರಿ ನಾಲ್ಕು ಜನರನ್ನ ನಿನ್ನೆ ಒಂದು ವಾರ ಕಸ್ಟಡಿಗೆ ಕೇಳಿದ್ದರು. ಆದರೆ ಎರಡು ದಿನ ಕೊಟ್ಟಿದ್ದಾರೆ. ಅಷ್ಟರಲ್ಲಿ ವಿಚಾರಣೆ ಮುಗಿದ್ರೆ ನ್ಯಾಯಾಂಗದ ವಶಕ್ಕೆ ಕೊಡ್ತಾರೆ ಅಂತಾ ಪರಮೇಶ್ವರ್ ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…