ಬೆಂಗಳೂರು: ದರ್ಶನ್ ಕೇಸ್ ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ ಸಿಎಂ ಯಾರಿಗೂ ಸೊಪ್ಪು ಹಾಕಲ್ಲ, ಯಾರೂ ಕೂಡ ನಮ್ಮ ಹತ್ರ ಬಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಅಂದರು.
ಇನ್ನು ಬಿಜೆಪಿ ಶಾಸಕರೊಬ್ಬರ ಸಂಬಂಧಿ ದರ್ಶನ್ ಕೇಸ್ ಪ್ರಕರಣದಲ್ಲಿ ಭಾಗಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಇರಬಹುದೇನೋ ಗೊತ್ತಿಲ್ಲ. ಪಕ್ಷದ ಆಧಾರದ ಮೇಲೆ ಈ ಕೇಸ್ ನೊಡ್ತಾ ಇಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಯಾರು ಏನು ತಪ್ಪು ಮಾಡಿದ್ದಾರೆ ಅದರ ಮೇಲೆ ಹೋಗುತ್ತದೆ ಅಂದರು.
ದರ್ಶನ್ ಸೇರಿ ನಾಲ್ಕು ಜನರನ್ನ ನಿನ್ನೆ ಒಂದು ವಾರ ಕಸ್ಟಡಿಗೆ ಕೇಳಿದ್ದರು. ಆದರೆ ಎರಡು ದಿನ ಕೊಟ್ಟಿದ್ದಾರೆ. ಅಷ್ಟರಲ್ಲಿ ವಿಚಾರಣೆ ಮುಗಿದ್ರೆ ನ್ಯಾಯಾಂಗದ ವಶಕ್ಕೆ ಕೊಡ್ತಾರೆ ಅಂತಾ ಪರಮೇಶ್ವರ್ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…