ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ – ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ : ಸಿಎಂ ಮಹತ್ವದ ಘೋಷಣೆ – vishwanews24

Featured, ದಕ್ಷಿಣ ಕನ್ನಡ

ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ ..

ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ 

ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ  ಸಿಎಂ ಮಹತ್ವದ ಘೋಷಣೆ

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಇದನ್ನೂ ಓದಿ: 

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ – vishwanews24

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಪ್ರಬಲ ವೇದಿಕೆಯಾಗಲಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು.

ಇದನ್ನೂ ಓದಿ: 

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – vishwanews24

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು.

Leave a Reply