ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಭೇಟಿ ನೀಡಿದ್ದು, ನಾಡ ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
ಈ ಬಾರಿಯ ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ಸಿಎಂ ಬವರಾಜ ಬೊಮ್ಮಾಯಿ ಅವರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಆಹ್ವಾನ ನೀಡಿದರು.
ಈ ಸಂದರ್ಭ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, “ದಸರಾ ಉದ್ಘಾಟನೆಗೆ ಎಸ್ ಎಂ ಕೃಷ್ಣ ಅವರನ್ನು ಆಹ್ವಾನಿಸಿದ್ದೇವೆ. ಅವರು ನಮ್ಮ ಆಹ್ವಾನಕ್ಕೆ ಒಪ್ಪಿಕೊಂಡಿದ್ದಾರೆ. ಎಸ್ ಎಂ ಕೃಷ್ಣ ಅವರು ಓರ್ವ ಮುತ್ಸದ್ಧಿ ರಾಜಕಾರಣಿ” ಎಂದಿದ್ದಾರೆ.
ಈ ವೇಳೆ ಪ್ರೇಮಾ ಕೃಷ್ಣ, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಮೈಸೂರು ಮೇಯರ್ ಸುನಂದಾ ಪಾಲನೇತ್ರ ಉಪಸ್ಥಿತರಿದ್ದರು.
ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ದಸರ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…