Featured

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು – vishwanews24

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್‌ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಸಂಸದರು ಹೊಸ ಸುದ್ದಿ ನೀಡಿದ್ದಾರೆ.

ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅ. 10 ಹಾಗೂ ಅ. 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ.

ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್‌ ಪುತ್ರನ್‌ ಅವರು ಬಸ್‌ ಮತ್ತು ಈಗಿರುವ ರೈಲುಗಳ ಟಿಕೆಟ್‌ ಸಂಪೂರ್ಣ ಖಾಲಿಯಾದ ಬಗ್ಗೆ ಸಂಸದರ ಗಮನ ಸೆಳೆದಿದ್ದರು. ಬಸ್‌ ಟಿಕೆಟ್‌ ದರ ಏರಿಕೆಯೂ ಆಗಿದೆ. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು.

ಮೈಸೂರಿನಿಂದ ಮೆಜೆಸ್ಟಿಕ್‌ ಮಾರ್ಗವಾಗಿ ಒಂದು ರೈಲು ಮತ್ತೂಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ನೀಡಿದ್ದಾರೆ.

ರೈಲಿನ ವೇಳಾಪಟ್ಟಿ ಹೀಗಿದೆ
ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್‌ ಬೈಪಾಸ್‌ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ.

ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

06585 ರೈಲು
ಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585) ಮೆಜೆಸ್ಟಿಕ್‌ನಿಂದ ರಾತ್ರಿ 12.20 ಹಾಗೂ 12.40ಕ್ಕೆ ಯಶವಂತಪುರದಿಂದ ಹೊರಟು ಪಡೀಲ್‌ ಬೈಪಾಸ್‌ ಮೂಲಕ ರವಿವಾರ ಬೆ. 11.30ಕ್ಕೆ ಉಡುಪಿ ತಲುಪಿ 4ಕ್ಕೆ ಕಾರವಾರ ತಲುಪಲಿದೆ.

ಅ.13ರ ರವಿವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು (06586) ಉಡುಪಿಗೆ ಮಧ್ಯರಾತ್ರಿ 2.40 ತಲುಪಿ ಅ. 14ರ ಸೋಮವಾರ ಮಧ್ಯಾಹ್ನ ಯಶವಂತಪುರ 1ಕ್ಕೆ ಮತ್ತು ಸಂಜೆ 4.40ಕ್ಕೆ ಮೈಸೂರು ಸಂಜೆ 4.40 ಕ್ಕೆ ತಲುಪಲಿದೆ.

ಮನವಿಗೆ ಸ್ಪಂದನ
ನವರಾತ್ರಿ ಹಾಗೂ ವಿಜಯ ದಶಮಿಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಕರಾವಳಿಗೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಎರಡು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ. ಇದಕ್ಕಾಗಿ ನೈಋತ್ಯ ರೈಲ್ವೇ, ಸಚಿವ ಆಶ್ವಿ‌ನಿ ವೈಷ್ಣವ್‌ರಿಗೆ ವಂದನೆಗಳು.
ಕೋಟ ಶ್ರೀನಿವಾಸ ಪೂಜಾರಿ, ಸಂಸದ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago