Featured

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು – vishwanews24

ದಸರಾ ಹಬ್ಬ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್‌ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಸಂಸದರು ಹೊಸ ಸುದ್ದಿ ನೀಡಿದ್ದಾರೆ.

ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅ. 10 ಹಾಗೂ ಅ. 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ.

ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್‌ ಪುತ್ರನ್‌ ಅವರು ಬಸ್‌ ಮತ್ತು ಈಗಿರುವ ರೈಲುಗಳ ಟಿಕೆಟ್‌ ಸಂಪೂರ್ಣ ಖಾಲಿಯಾದ ಬಗ್ಗೆ ಸಂಸದರ ಗಮನ ಸೆಳೆದಿದ್ದರು. ಬಸ್‌ ಟಿಕೆಟ್‌ ದರ ಏರಿಕೆಯೂ ಆಗಿದೆ. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು.

ಮೈಸೂರಿನಿಂದ ಮೆಜೆಸ್ಟಿಕ್‌ ಮಾರ್ಗವಾಗಿ ಒಂದು ರೈಲು ಮತ್ತೂಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ನೀಡಿದ್ದಾರೆ.

ರೈಲಿನ ವೇಳಾಪಟ್ಟಿ ಹೀಗಿದೆ
ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್‌ ಬೈಪಾಸ್‌ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ.

ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

06585 ರೈಲು
ಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585) ಮೆಜೆಸ್ಟಿಕ್‌ನಿಂದ ರಾತ್ರಿ 12.20 ಹಾಗೂ 12.40ಕ್ಕೆ ಯಶವಂತಪುರದಿಂದ ಹೊರಟು ಪಡೀಲ್‌ ಬೈಪಾಸ್‌ ಮೂಲಕ ರವಿವಾರ ಬೆ. 11.30ಕ್ಕೆ ಉಡುಪಿ ತಲುಪಿ 4ಕ್ಕೆ ಕಾರವಾರ ತಲುಪಲಿದೆ.

ಅ.13ರ ರವಿವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು (06586) ಉಡುಪಿಗೆ ಮಧ್ಯರಾತ್ರಿ 2.40 ತಲುಪಿ ಅ. 14ರ ಸೋಮವಾರ ಮಧ್ಯಾಹ್ನ ಯಶವಂತಪುರ 1ಕ್ಕೆ ಮತ್ತು ಸಂಜೆ 4.40ಕ್ಕೆ ಮೈಸೂರು ಸಂಜೆ 4.40 ಕ್ಕೆ ತಲುಪಲಿದೆ.

ಮನವಿಗೆ ಸ್ಪಂದನ
ನವರಾತ್ರಿ ಹಾಗೂ ವಿಜಯ ದಶಮಿಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಕರಾವಳಿಗೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಎರಡು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ. ಇದಕ್ಕಾಗಿ ನೈಋತ್ಯ ರೈಲ್ವೇ, ಸಚಿವ ಆಶ್ವಿ‌ನಿ ವೈಷ್ಣವ್‌ರಿಗೆ ವಂದನೆಗಳು.
ಕೋಟ ಶ್ರೀನಿವಾಸ ಪೂಜಾರಿ, ಸಂಸದ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago