ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 06258 ಸೆ. 30ರಂದು ಯಶವಂತಪುರದಿಂದ ರಾತ್ರಿ 11.55ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅ. 1ರಂದು 2.35ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 11.30ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ.
ಸೆ.26ರಂದು ಮತ್ತು ಸೆ.28ರಂದು ಎಸ್ಎಂವಿಬಿಯಿಂದ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 4.15ಕ್ಕೆ ಹೊಸಪೇಟೆ ತಲುಪಲಿದೆ. ಹೊಸಪೇಟಿಯಿಂದ ಸೆ.27 ಮತ್ತು ಸೆ.29ರಂದು ರಾತ್ರಿ 8.45ಕ್ಕೆ ಹೊರಡಲಿರುವ ರೈಲು ಬೆಳಗ್ಗೆ 8.10ಕ್ಕೆ ಎಸ್ಎಂವಿಬಿ ತಲುಪಲಿದೆ.
22 ಗಂಟೆಗಳಲ್ಲಿ ಸ್ಲೀಪರ್ ಕೋಚ್ ಬುಕ್!
ಬೆಂಗಳೂರು – ಮಂಗಳೂರು ನಡುವಿನ ದಸರಾ ವಿಶೇಷ ರೈಲಿಗೆ ರೈಲು ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. 22 ಗಂಟೆಗಳಲ್ಲಿ ಸ್ಲೀಪರ್ ಕೋಚ್ನ ಎಲ್ಲಾ ಸೀಟುಗಳು ಬುಕ್ ಆಗಿದೆ. ಹಬ್ಬದ ಸಮಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಶೇಷ ರೈಲಿನ ಅಗತ್ಯವಿರುವುದು ಸಾಬೀತಾಗಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…
ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…
ನವೆಂಬರ್ ಮೊದಲ ವಾರದಲ್ಲಿ ಪೈಪ್ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್ಲೈನ್ ಮೂಲಕ…