Featured

ದಾಖಲೆ ಇಲ್ಲದೇ ನಾನು ಮಾತನಾಡಲ್ಲ : ಪ್ರಶಾಂತ್‌ ಸಂಬರಗಿ -Vishwanews24

– ದಾಖಲೆ ಇಲ್ಲದೇ ನಾನು ಮಾತನಾಡಲ್ಲ

– ನಾನು ಯಾರ ಏಜೆಂಟ್‌ ಅಲ್ಲ. ನಾನೊಬ್ಬ ಕನ್ನಡಿಗ. ಕನ್ನಡಕ್ಕಾಗಿ ಹೋರಾಡುವ ವ್ಯಕ್ತಿ

ಬೆಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈ ಹಿಂದೆ ಹೇಳಿದ ಮೂರು ಸ್ಫೋಟಕ ಒಗಟುಗಳು ಎಲ್ಲ ಸತ್ಯವಾಗಿದೆ ಎಂದು ಉದ್ಯಮಿ, ಸಿನಿ ವಿತರಕ ಪ್ರಶಾಂತ್‌ ಸಂಬರಗಿ ಹೇಳಿದ್ದಾರೆ.

ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸಿಸಿಬಿ ಪೊಲೀಸರಿಂದ ನೋಟಿಸ್‌ ಬಂದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂದು ಬೆಳಗ್ಗೆ 10 ಗಂಟೆಗೆ ನಾನು ಸಿಸಿಬಿ ಕಚೇರಿಗೆ ತೆರಳಿ ನನ್ನಲ್ಲಿರುವ ಪ್ರಮುಖ ಸಾಕ್ಷ್ಯಗಳನ್ನು ನೀಡುತ್ತೇನೆ. ನಾನು ಗಾಳಿಯಲ್ಲಿ ಗುಂಡು ಹಾರಿಸುವ ವ್ಯಕ್ತಿಯಲ್ಲ. ನಾನು ಈ ಹಿಂದೆ ಹೇಳಿದ ಎಲ್ಲ ಒಗಟುಗಳು ಸತ್ಯವಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಮುಂಬೈಗೆ ಸೊಸೆಯಾಗಿ ಒಬ್ಬರು ತೆರಳಿರುವ ಕುಟುಂಬದ ವ್ಯಕ್ತಿಯ ಬಗ್ಗೆ ಹೇಳಿದ್ದೆ. ಇದು ನಿಜವಾಗಿದ್ದು ಜೀವರಾಜ್ ಆಳ್ವಾ ಮಗ ಆದಿತ್ಯಾ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆ ಮಗಳು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ಮದುವೆಯಾಗಿದ್ದಾರೆ. ಸುಶಾಂತ್‌ ಸಿಂಗ್‌ ಪ್ರಕರಣಕ್ಕೂ ಬೆಂಗಳೂರಿಗೂ ಸಂಬಂಧ ಇದೆ ಎಂದು ತಿಳಿಸಿದ್ದು ಅದು ಕೂಡ ನಿಜವಾಗಿದ್ದು ಎನ್‌ಸಿಬಿಯಿಂದ ಬಿಬಿಎಂಪಿ ಕಾಂಗ್ರೆಸ್‌ ಸದಸ್ಯ ಕೇಶವ್ ಮೂರ್ತಿ ಮಗನಿಗೆ ನೋಟಿಸ್ ಬಂದಿದೆ ಎಂದು ಹೇಳಿದರು.

ಡ್ರಗ್ಸ್‌ ದಂಧೆಯಲ್ಲಿ ಬಾಲಿವುಡ್‌ಗೂ ಸ್ಯಾಂಡಲ್‌ವುಡ್‌ಗೂ ಸಂಬಂಧ ಇದೆ. ಅದರಲ್ಲಿ ಇಮ್ತಿಯಾಸ್ ಖಾತ್ರಿ ಇದ್ದಾನೆ ಅಂತ ಹೇಳಿದ್ದೆ. ಅದು ಕೂಡ ನಿಜವಾಗಿದೆ. ನಾನು ಮಾಡಿದ ಎಲ್ಲಒಗಟುಗಳು ನಿಜವಾಗಿದ್ದು ಇನ್ನು ಎರಡು ಒಗಟುಗಳು ಶೀಘ್ರವೇ ಸ್ಫೋಟಗೊಳ್ಳಲಿದೆ ಎಂದು ಹೇಳಿದರು.

ನಾನು ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ನಾನು ಸಂಜನಾ ಜೊತೆಯಲ್ಲೇ ಜಮೀರ್‌ ಶ್ರೀಲಂಕಾಗೆ ಹೋಗಿದ್ದಾರೆ ಎಂದು ಹೇಳಿಲ್ಲ. ಆದರೆ 2019ರ ಜೂನ್ 8,‌ 9, 10ರಂದು ಜಮೀರ್ ಅಹ್ಮದ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಹೇಳಲಿ. ನನಗೆ ಜಮೀರ್‌ ಉತ್ತರ ನೀಡುವ ಅಗತ್ಯವಿಲ್ಲ. ಜನತೆ ಪಾಸ್‌ಪೋರ್ಟ್‌ ತೋರಿಸಿದರೆ ಸಾಕು. ನನ್ನ ಒಂದು ಸಣ್ಣ ಪ್ರಶ್ನೆಗೆ ಉತ್ತರ ನೀಡಲಿ ಎಂದು ಸವಾಲು ಎಸೆದರು.

ತನ್ನ ಬಗ್ಗೆ ಬಂದಿರುವ ಬಿಜೆಪಿ ಏಜೆಂಟ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ನಾನು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ಅವರ ಕನ್ನಡ ಪರ ನಿಲುವು ನನಗೆ ಬಹಳ ಇಷ್ಟವಾಗಿತ್ತು. ಅವರ ಕೆಳಗಡೆ ಕುಳಿತಿದ್ದ ಫೋಟೋ ಫೇಸ್‌ಬುಕ್‌ನಲ್ಲಿ ಹಾಕಿದ್ದೆ. ಕುಮಾರಸ್ವಾಮಿಯವರ ಜೊತೆಯಲ್ಲೂ ನಾನು ಮಾತನಾಡಿದ್ದೇನೆ. ನಾನು ಯಾರ ಏಜೆಂಟ್‌ ಅಲ್ಲ. ನಾನೊಬ್ಬ ಕನ್ನಡಿಗ. ಕನ್ನಡಕ್ಕಾಗಿ ಹೋರಾಡುವ ವ್ಯಕ್ತಿ ಎಂದು ತಿಳಿಸಿದರು.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 hour ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago