ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈ ಹಿಂದೆ ಹೇಳಿದ ಮೂರು ಸ್ಫೋಟಕ ಒಗಟುಗಳು ಎಲ್ಲ ಸತ್ಯವಾಗಿದೆ ಎಂದು ಉದ್ಯಮಿ, ಸಿನಿ ವಿತರಕ ಪ್ರಶಾಂತ್ ಸಂಬರಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸಿಸಿಬಿ ಪೊಲೀಸರಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂದು ಬೆಳಗ್ಗೆ 10 ಗಂಟೆಗೆ ನಾನು ಸಿಸಿಬಿ ಕಚೇರಿಗೆ ತೆರಳಿ ನನ್ನಲ್ಲಿರುವ ಪ್ರಮುಖ ಸಾಕ್ಷ್ಯಗಳನ್ನು ನೀಡುತ್ತೇನೆ. ನಾನು ಗಾಳಿಯಲ್ಲಿ ಗುಂಡು ಹಾರಿಸುವ ವ್ಯಕ್ತಿಯಲ್ಲ. ನಾನು ಈ ಹಿಂದೆ ಹೇಳಿದ ಎಲ್ಲ ಒಗಟುಗಳು ಸತ್ಯವಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಮುಂಬೈಗೆ ಸೊಸೆಯಾಗಿ ಒಬ್ಬರು ತೆರಳಿರುವ ಕುಟುಂಬದ ವ್ಯಕ್ತಿಯ ಬಗ್ಗೆ ಹೇಳಿದ್ದೆ. ಇದು ನಿಜವಾಗಿದ್ದು ಜೀವರಾಜ್ ಆಳ್ವಾ ಮಗ ಆದಿತ್ಯಾ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ಮನೆ ಮಗಳು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ಮದುವೆಯಾಗಿದ್ದಾರೆ. ಸುಶಾಂತ್ ಸಿಂಗ್ ಪ್ರಕರಣಕ್ಕೂ ಬೆಂಗಳೂರಿಗೂ ಸಂಬಂಧ ಇದೆ ಎಂದು ತಿಳಿಸಿದ್ದು ಅದು ಕೂಡ ನಿಜವಾಗಿದ್ದು ಎನ್ಸಿಬಿಯಿಂದ ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಕೇಶವ್ ಮೂರ್ತಿ ಮಗನಿಗೆ ನೋಟಿಸ್ ಬಂದಿದೆ ಎಂದು ಹೇಳಿದರು.
ಡ್ರಗ್ಸ್ ದಂಧೆಯಲ್ಲಿ ಬಾಲಿವುಡ್ಗೂ ಸ್ಯಾಂಡಲ್ವುಡ್ಗೂ ಸಂಬಂಧ ಇದೆ. ಅದರಲ್ಲಿ ಇಮ್ತಿಯಾಸ್ ಖಾತ್ರಿ ಇದ್ದಾನೆ ಅಂತ ಹೇಳಿದ್ದೆ. ಅದು ಕೂಡ ನಿಜವಾಗಿದೆ. ನಾನು ಮಾಡಿದ ಎಲ್ಲಒಗಟುಗಳು ನಿಜವಾಗಿದ್ದು ಇನ್ನು ಎರಡು ಒಗಟುಗಳು ಶೀಘ್ರವೇ ಸ್ಫೋಟಗೊಳ್ಳಲಿದೆ ಎಂದು ಹೇಳಿದರು.
ನಾನು ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ನಾನು ಸಂಜನಾ ಜೊತೆಯಲ್ಲೇ ಜಮೀರ್ ಶ್ರೀಲಂಕಾಗೆ ಹೋಗಿದ್ದಾರೆ ಎಂದು ಹೇಳಿಲ್ಲ. ಆದರೆ 2019ರ ಜೂನ್ 8, 9, 10ರಂದು ಜಮೀರ್ ಅಹ್ಮದ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಹೇಳಲಿ. ನನಗೆ ಜಮೀರ್ ಉತ್ತರ ನೀಡುವ ಅಗತ್ಯವಿಲ್ಲ. ಜನತೆ ಪಾಸ್ಪೋರ್ಟ್ ತೋರಿಸಿದರೆ ಸಾಕು. ನನ್ನ ಒಂದು ಸಣ್ಣ ಪ್ರಶ್ನೆಗೆ ಉತ್ತರ ನೀಡಲಿ ಎಂದು ಸವಾಲು ಎಸೆದರು.
ತನ್ನ ಬಗ್ಗೆ ಬಂದಿರುವ ಬಿಜೆಪಿ ಏಜೆಂಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ನಾನು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ಅವರ ಕನ್ನಡ ಪರ ನಿಲುವು ನನಗೆ ಬಹಳ ಇಷ್ಟವಾಗಿತ್ತು. ಅವರ ಕೆಳಗಡೆ ಕುಳಿತಿದ್ದ ಫೋಟೋ ಫೇಸ್ಬುಕ್ನಲ್ಲಿ ಹಾಕಿದ್ದೆ. ಕುಮಾರಸ್ವಾಮಿಯವರ ಜೊತೆಯಲ್ಲೂ ನಾನು ಮಾತನಾಡಿದ್ದೇನೆ. ನಾನು ಯಾರ ಏಜೆಂಟ್ ಅಲ್ಲ. ನಾನೊಬ್ಬ ಕನ್ನಡಿಗ. ಕನ್ನಡಕ್ಕಾಗಿ ಹೋರಾಡುವ ವ್ಯಕ್ತಿ ಎಂದು ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…