Featured

ದಾಖಲೆ ಬರೆದ ಸ.ಹಿ.ಪ್ರಾ.ಶಾ ಕಾಸರಗೋಡು ;ಅಮೆರಿಕ ಯುಎಸ್‍ನಲ್ಲಿ ಭರ್ಜರಿ ಪ್ರದರ್ಶನ

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗ ಈ ಚಿತ್ರ ಕರ್ನಾಟಕ ಮಾತ್ರವಲ್ಲದೇ ಅಮೆರಿಕದಲ್ಲೂ ಯಶಸ್ವಿ ಕಾಣುತ್ತಿದೆ.

ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಅವರು ಚಿತ್ರದ ಬಗ್ಗೆ ಟ್ವೀಟ್ ಮಾಡಿ “ಕನ್ನಡ ಚಿತ್ರ ಅಮೆರಿಕಾದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿರುವುದನ್ನು ನೋಡಿ ಖುಷಿಯಾಗುತ್ತಿದೆ. ಅಮೆರಿಕದ ಕೆಲವು ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ಟೈಟಲ್ ಹಾಗೂ ಸ್ಕೋರ್ಸ್ ನಿಂದಲೇ ಸೆ. 29ರ ವರೆಗೂ ಯುಎಸ್ ಬಾಕ್ಸ್ ಆಫೀಸ್‍ನಲ್ಲಿ 85,509 ಡಾಲರ್(62.04 ಲಕ್ಷ ರೂ.) ಕಲೆಕ್ಷನ್ ಆಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಿಮ್ಮ ಈ ಟ್ವೀಟ್ ನಮಗೆ ತುಂಬಾ ಪ್ರೇರಣೆ ನೀಡಿದೆ. ನಿಮ್ಮ ಅಪ್‍ಡೇಟ್‍ಗೆ ಧನ್ಯವಾದಗಳು” ಎಂದು ಬರೆದು ನಿರ್ದೇಶಕ ಎಂದು ರಿಷಬ್ ಶೆಟ್ಟಿ ತರಣ್ ಅದರ್ಶ್ ಅವರ ಟ್ವೀಟ್ ನ್ನು ರೀ-ಟ್ವೀಟ್ ಮಾಡಿದ್ದಾರೆ.

ಸದ್ಯ ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ ಒಂದು ಹೊಸ ದಾಖಲೆ ಬರೆದಿದೆ. ಮೊಟ್ಟ ಮೊದಲ ಬಾರಿಗೆ ಅಂಡಮಾನ್ ಹಾಗೂ ನಿಕೋಬಾರ್ ನಲ್ಲಿ ಈ ಚಿತ್ರ ಪ್ರದರ್ಶನವಾಗಿ ದಾಖಲೆ ಬರೆದಿದೆ. ಕರ್ನಾಟಕದಲ್ಲಿ ಈ ಚಿತ್ರ ಯಶಸ್ಸು ಕಂಡು ಬೇರೆ ರಾಜ್ಯ ಹಾಗೂ ಬೇರೆ ದೇಶದಲ್ಲಿ ಯಶಸ್ಸು ಕಂಡಿದೆ. ಸೆ. 29 ಹಾಗೂ 30 ರಂದು ಫೋರ್ಟ್‍ಬ್ಲೇರ್ ನ ದಿವ್ಯಂ ಟಾಕೀಸಿನಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago