Featured

ದಾಖಲೆ ಬರೆದ ಸ.ಹಿ.ಪ್ರಾ.ಶಾ ಕಾಸರಗೋಡು ;ಅಮೆರಿಕ ಯುಎಸ್‍ನಲ್ಲಿ ಭರ್ಜರಿ ಪ್ರದರ್ಶನ

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗ ಈ ಚಿತ್ರ ಕರ್ನಾಟಕ ಮಾತ್ರವಲ್ಲದೇ ಅಮೆರಿಕದಲ್ಲೂ ಯಶಸ್ವಿ ಕಾಣುತ್ತಿದೆ.

ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಅವರು ಚಿತ್ರದ ಬಗ್ಗೆ ಟ್ವೀಟ್ ಮಾಡಿ “ಕನ್ನಡ ಚಿತ್ರ ಅಮೆರಿಕಾದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿರುವುದನ್ನು ನೋಡಿ ಖುಷಿಯಾಗುತ್ತಿದೆ. ಅಮೆರಿಕದ ಕೆಲವು ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ಟೈಟಲ್ ಹಾಗೂ ಸ್ಕೋರ್ಸ್ ನಿಂದಲೇ ಸೆ. 29ರ ವರೆಗೂ ಯುಎಸ್ ಬಾಕ್ಸ್ ಆಫೀಸ್‍ನಲ್ಲಿ 85,509 ಡಾಲರ್(62.04 ಲಕ್ಷ ರೂ.) ಕಲೆಕ್ಷನ್ ಆಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಿಮ್ಮ ಈ ಟ್ವೀಟ್ ನಮಗೆ ತುಂಬಾ ಪ್ರೇರಣೆ ನೀಡಿದೆ. ನಿಮ್ಮ ಅಪ್‍ಡೇಟ್‍ಗೆ ಧನ್ಯವಾದಗಳು” ಎಂದು ಬರೆದು ನಿರ್ದೇಶಕ ಎಂದು ರಿಷಬ್ ಶೆಟ್ಟಿ ತರಣ್ ಅದರ್ಶ್ ಅವರ ಟ್ವೀಟ್ ನ್ನು ರೀ-ಟ್ವೀಟ್ ಮಾಡಿದ್ದಾರೆ.

ಸದ್ಯ ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ ಒಂದು ಹೊಸ ದಾಖಲೆ ಬರೆದಿದೆ. ಮೊಟ್ಟ ಮೊದಲ ಬಾರಿಗೆ ಅಂಡಮಾನ್ ಹಾಗೂ ನಿಕೋಬಾರ್ ನಲ್ಲಿ ಈ ಚಿತ್ರ ಪ್ರದರ್ಶನವಾಗಿ ದಾಖಲೆ ಬರೆದಿದೆ. ಕರ್ನಾಟಕದಲ್ಲಿ ಈ ಚಿತ್ರ ಯಶಸ್ಸು ಕಂಡು ಬೇರೆ ರಾಜ್ಯ ಹಾಗೂ ಬೇರೆ ದೇಶದಲ್ಲಿ ಯಶಸ್ಸು ಕಂಡಿದೆ. ಸೆ. 29 ಹಾಗೂ 30 ರಂದು ಫೋರ್ಟ್‍ಬ್ಲೇರ್ ನ ದಿವ್ಯಂ ಟಾಕೀಸಿನಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago